ರಾಜ್ಯ

ಫೋನ್‌ ಕರೆಯಲ್ಲೆ ಶ್ರೀರಾಮುಲು ಮನವೊಲಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಬಳ್ಳಾರಿ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್‌ ಕರೆ ಮಾಡಿ ಮನವೊಲಿಸಿದ್ದಾರೆ.

ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ ರಾಜೀನಾಮೆ ಕೋಡುತ್ತೇನೆ ಈ ತರ ಅವಮಾನ ಸಹಿಸಿಕೊಳ್ಳಲಾರೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಜೆ.ಪಿ ನಡ್ಡಾ ಶ್ರೀ ರಾಮುಲು ಅವರಿಗೆ ಫೋನ್‌ ಕರೆ ಮಾಡಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ದೆಹಲಿಗೆ ಬನ್ನಿ ಕೂತು ಮಾತನಾಡೋಣ. ಪಕ್ಷ ಬಿಡುವ ಬಗ್ಗೆ, ಪಕ್ಷದ ವಿರುದ್ಧ ಏನೂ ಮಾತನಾಡಬೇಡಿ ಎಂದು ಮನವೊಳಿಸುವ ಮೂಲಕ ಶ್ರೀರಾಮುಲು ಅವರ ನಿರ್ಧಾರಕ್ಕೆ ಸ್ವಲ್ಪ ಮಟ್ಟಿನ ಬ್ರೇಕ್‌ ಹಾಕಿದ್ದಾರೆ.

ಸಂಡೂರು ಉಪಚುನಾವಣೆ ಸೋಲಿಗೆ ತಮ್ಮನ್ನು ದೂಷಿಸಿದ ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಶ್‌ ವಿರುದ್ಧ ಶ್ರೀ ರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು. ವಿಜಯೇಂದ್ರ ಮತ್ತು ಜನಾರ್ಧನ ರೆಡ್ಡಿ ಒಟ್ಟಿಗೆ ಸೇರಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬೇಕಿದ್ದರೆ ಈಗಲೇ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಹೊರನಡೆಯುತ್ತೇನೆ ಎಂದು ಶ್ರೀ ರಾಮುಲು ಅಸಮಾಧಾನ ಹೊರಹಾಕಿದ್ದರು.

ಆಂದೋಲನ ಡೆಸ್ಕ್

Recent Posts

ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಪ್ರಮಾಣ ವಚನ ಸ್ವೀಕಾರ

ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್‌ ಕಾರ್ನಿ ಬ್ಯಾಂಕ್‌…

9 mins ago

ಬಹುಭಾಷಾ ಪಂಡಿತ ಪಂಚಾಕ್ಷರಿ ಹಿರೇಮಠ ನಿಧನ

ಕೊಪ್ಪಳ: ಹೈದರಾಬಾದ್‌ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…

22 mins ago

ಓದುಗರ ಪತ್ರ: ಅರಳಬೇಕು ಬಾಳು ಕಲಾಕುಲುಮೆಯಲಿ!..

ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆಗೆ ಖಾಕಿ ಖಾದಿ ಕಾವಿ ಕೃಪೆಯಂತೆ! ದಂಗುಬಡಿಸುವ ಸುದ್ದಿಯಿದು ಬೆಚ್ಚಿ ಬೆದರಿಬಿದ್ದಿದೆ ಜನ ಜಗ! ಕಲೆಯಲಿ…

3 hours ago

ಓದುಗರ ಪತ್ರ: ಗ್ಯಾರಂಟಿ..?!

ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ವಿತರಿಸುವಾಗ ಸರ್ಕಾರದಿಂದ ಆಗಬಹುದು ಅಲ್ಲಲ್ಲಿ ತುಸು ವ್ಯತ್ಯಾಸ... ಆದರೆ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ…

3 hours ago

ಓದುಗರ ಪತ್ರ: ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿ

ಕಳೆದ ವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ೧೪ ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ನಟಿ ರನ್ಯಾ…

3 hours ago

ಓದುಗರ ಪತ್ರ: ರಕ್ತ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿ

ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಹೊಂದಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳಿಲ್ಲದೆ ಜನರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾದ ಅನಿವಾರ್ಯತೆ…

3 hours ago