ಬಳ್ಳಾರಿ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್ ಕರೆ ಮಾಡಿ ಮನವೊಲಿಸಿದ್ದಾರೆ.
ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ ರಾಜೀನಾಮೆ ಕೋಡುತ್ತೇನೆ ಈ ತರ ಅವಮಾನ ಸಹಿಸಿಕೊಳ್ಳಲಾರೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು.
ಇದಕ್ಕೆ ಜೆ.ಪಿ ನಡ್ಡಾ ಶ್ರೀ ರಾಮುಲು ಅವರಿಗೆ ಫೋನ್ ಕರೆ ಮಾಡಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ದೆಹಲಿಗೆ ಬನ್ನಿ ಕೂತು ಮಾತನಾಡೋಣ. ಪಕ್ಷ ಬಿಡುವ ಬಗ್ಗೆ, ಪಕ್ಷದ ವಿರುದ್ಧ ಏನೂ ಮಾತನಾಡಬೇಡಿ ಎಂದು ಮನವೊಳಿಸುವ ಮೂಲಕ ಶ್ರೀರಾಮುಲು ಅವರ ನಿರ್ಧಾರಕ್ಕೆ ಸ್ವಲ್ಪ ಮಟ್ಟಿನ ಬ್ರೇಕ್ ಹಾಕಿದ್ದಾರೆ.
ಸಂಡೂರು ಉಪಚುನಾವಣೆ ಸೋಲಿಗೆ ತಮ್ಮನ್ನು ದೂಷಿಸಿದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಶ್ ವಿರುದ್ಧ ಶ್ರೀ ರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು. ವಿಜಯೇಂದ್ರ ಮತ್ತು ಜನಾರ್ಧನ ರೆಡ್ಡಿ ಒಟ್ಟಿಗೆ ಸೇರಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬೇಕಿದ್ದರೆ ಈಗಲೇ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಹೊರನಡೆಯುತ್ತೇನೆ ಎಂದು ಶ್ರೀ ರಾಮುಲು ಅಸಮಾಧಾನ ಹೊರಹಾಕಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…