ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಮ್ಮೆ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಎಡವಟ್ಟು: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟು ನಡೆಯುತ್ತಿದ್ದು, ಇದೀಗ ಮತ್ತೊಮ್ಮೆ ಕೆಪಿಎಸ್‌ಸಿ(ಕೆಎಎಸ್‌) ಮರು ಪರೀಕ್ಷೆಯಲ್ಲೂ ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ತಪ್ಪು ಕಂಡುಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ತುಘಲಕ್ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಎಡಬಿಡಂಗಿ ಮಂದಿ ಮಾಗಧರಿಂದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಎಡವಟ್ಟು ಉಂಟಾಗಿದೆ. ಕನ್ನಡ ನಾಡಿನಲ್ಲಿ ಕನ್ನಡದ ಅನುವಾದದಲ್ಲಿಯೇ ಮತ್ತೊಮ್ಮೆ ತಪ್ಪಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಕಳೆದ ಆಗಸ್ಟ್‌ 27 ರಂದು ತರಾತುರಿಯಲ್ಲಿ ಪರೀಕ್ಷೆ ನಡೆಸಿ, ಪ್ರಶ್ನೆಪತ್ರಿಕೆಯಲ್ಲಿ ಗೊಂದಲ ಸೃಷ್ಟಿಸಿ, ಯುವಕರ ಭವಿಷ್ಯದ ಕನಸುಗಳಿಗೆ ಕಲ್ಲು ಹಾಕಿದ್ದ ಸರ್ಕಾರ ಈಗ ಮತ್ತೊಮ್ಮೆ ಅದೇ ತಪ್ಪನ್ನು ಪುನರಾರ್ವತಿಸಿದೆ. ರಾಜ್ಯದಾದ್ಯಂತ ನಡೆಸಲಾದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಮತ್ತೊಮ್ಮೆ ಎಡವಟ್ಟು ಮಾಡಿದೆ. ಅದಲ್ಲದೇ ಕೆಲವು ಕೇಂದ್ರಗಳಲ್ಲಿ ಒಎಂಆರ್ ಶೀಟ್, ಹಾಲ್ ಟಿಕೆಟ್ ಸಂಖ್ಯೆಯಲ್ಲಿ ಹೊಂದಾಣಿಕೆಯಾಗದೆ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ. ಪರೀಕ್ಷಾರ್ಥಿಗಳ ಕೈಗೆ ಪ್ರಶ್ನೆಪತ್ರಿಕೆ ಹೋಗುವುದಕ್ಕೂ ಮುನ್ನ ಪರಿಶೀಲಿಸುವ ಅಗತ್ಯವಿತ್ತು. ಸರಿಯಾದ ಅನುವಾದ ಮಾಡದೇ ಇರುವುದು ನಾಚಿಕೆಗೇಡಿನ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟುಗಳಾಗುತ್ತಿದ್ದು, ಕೆ.ಎ.ಎಸ್ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಸಾಲು ಸಾಲು ತಪ್ಪುಗಳಿಂದಾಗಿ ನಡೆದ ಮರು ಪರೀಕ್ಷೆಯಲ್ಲಿಯೂ ಸಹ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ ಎಂದು ಕಿಡಿಕಾರಿದೆ.

ಸಿಎಂ ಸಿದ್ದರಾಮಯ್ಯ ಕನ್ನಡದ ಹೆಸರಿನಲ್ಲಿ ರಾಜಕಾರಣ ಮಾಡುವ ನಿಮ್ಮಿಂದ ಕನ್ನಡಕ್ಕೆ ಅವಮಾನವಾಗುತ್ತಿದೆ. ಪರಿಕ್ಷಾರ್ಥಿಗಳ ಬದುಕಿನ ಜೊತೆ ಇನ್ನೆಷ್ಟು ಚೆಲ್ಲಾಟವಾಡುತ್ತಿರಾ..?? ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ನಿಮಗೆ ಯೋಗ್ಯತೆ ಇಲ್ಲವೇ..?? ಎಂದು ಪ್ರಶ್ನಿಸಿದೆ.

ಅರ್ಚನ ಎಸ್‌ ಎಸ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago