ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಮ್ಮೆ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಎಡವಟ್ಟು: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟು ನಡೆಯುತ್ತಿದ್ದು, ಇದೀಗ ಮತ್ತೊಮ್ಮೆ ಕೆಪಿಎಸ್‌ಸಿ(ಕೆಎಎಸ್‌) ಮರು ಪರೀಕ್ಷೆಯಲ್ಲೂ ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ತಪ್ಪು ಕಂಡುಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ತುಘಲಕ್ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಎಡಬಿಡಂಗಿ ಮಂದಿ ಮಾಗಧರಿಂದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಎಡವಟ್ಟು ಉಂಟಾಗಿದೆ. ಕನ್ನಡ ನಾಡಿನಲ್ಲಿ ಕನ್ನಡದ ಅನುವಾದದಲ್ಲಿಯೇ ಮತ್ತೊಮ್ಮೆ ತಪ್ಪಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಕಳೆದ ಆಗಸ್ಟ್‌ 27 ರಂದು ತರಾತುರಿಯಲ್ಲಿ ಪರೀಕ್ಷೆ ನಡೆಸಿ, ಪ್ರಶ್ನೆಪತ್ರಿಕೆಯಲ್ಲಿ ಗೊಂದಲ ಸೃಷ್ಟಿಸಿ, ಯುವಕರ ಭವಿಷ್ಯದ ಕನಸುಗಳಿಗೆ ಕಲ್ಲು ಹಾಕಿದ್ದ ಸರ್ಕಾರ ಈಗ ಮತ್ತೊಮ್ಮೆ ಅದೇ ತಪ್ಪನ್ನು ಪುನರಾರ್ವತಿಸಿದೆ. ರಾಜ್ಯದಾದ್ಯಂತ ನಡೆಸಲಾದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಮತ್ತೊಮ್ಮೆ ಎಡವಟ್ಟು ಮಾಡಿದೆ. ಅದಲ್ಲದೇ ಕೆಲವು ಕೇಂದ್ರಗಳಲ್ಲಿ ಒಎಂಆರ್ ಶೀಟ್, ಹಾಲ್ ಟಿಕೆಟ್ ಸಂಖ್ಯೆಯಲ್ಲಿ ಹೊಂದಾಣಿಕೆಯಾಗದೆ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ. ಪರೀಕ್ಷಾರ್ಥಿಗಳ ಕೈಗೆ ಪ್ರಶ್ನೆಪತ್ರಿಕೆ ಹೋಗುವುದಕ್ಕೂ ಮುನ್ನ ಪರಿಶೀಲಿಸುವ ಅಗತ್ಯವಿತ್ತು. ಸರಿಯಾದ ಅನುವಾದ ಮಾಡದೇ ಇರುವುದು ನಾಚಿಕೆಗೇಡಿನ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಸಾಲು ಸಾಲು ಎಡವಟ್ಟುಗಳಾಗುತ್ತಿದ್ದು, ಕೆ.ಎ.ಎಸ್ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಸಾಲು ಸಾಲು ತಪ್ಪುಗಳಿಂದಾಗಿ ನಡೆದ ಮರು ಪರೀಕ್ಷೆಯಲ್ಲಿಯೂ ಸಹ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ ಎಂದು ಕಿಡಿಕಾರಿದೆ.

ಸಿಎಂ ಸಿದ್ದರಾಮಯ್ಯ ಕನ್ನಡದ ಹೆಸರಿನಲ್ಲಿ ರಾಜಕಾರಣ ಮಾಡುವ ನಿಮ್ಮಿಂದ ಕನ್ನಡಕ್ಕೆ ಅವಮಾನವಾಗುತ್ತಿದೆ. ಪರಿಕ್ಷಾರ್ಥಿಗಳ ಬದುಕಿನ ಜೊತೆ ಇನ್ನೆಷ್ಟು ಚೆಲ್ಲಾಟವಾಡುತ್ತಿರಾ..?? ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ನಿಮಗೆ ಯೋಗ್ಯತೆ ಇಲ್ಲವೇ..?? ಎಂದು ಪ್ರಶ್ನಿಸಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago