ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಸಾಲು ಸಾಲು ಎಡವಟ್ಟು ನಡೆಯುತ್ತಿದ್ದು, ಇದೀಗ ಮತ್ತೊಮ್ಮೆ ಕೆಪಿಎಸ್ಸಿ(ಕೆಎಎಸ್) ಮರು ಪರೀಕ್ಷೆಯಲ್ಲೂ ಕನ್ನಡ ಪ್ರಶ್ನೆ ಪ್ರತಿಕೆಯಲ್ಲಿ ತಪ್ಪು ಕಂಡುಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ತುಘಲಕ್ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎಡಬಿಡಂಗಿ ಮಂದಿ ಮಾಗಧರಿಂದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಎಡವಟ್ಟು ಉಂಟಾಗಿದೆ. ಕನ್ನಡ ನಾಡಿನಲ್ಲಿ ಕನ್ನಡದ ಅನುವಾದದಲ್ಲಿಯೇ ಮತ್ತೊಮ್ಮೆ ತಪ್ಪಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಕಳೆದ ಆಗಸ್ಟ್ 27 ರಂದು ತರಾತುರಿಯಲ್ಲಿ ಪರೀಕ್ಷೆ ನಡೆಸಿ, ಪ್ರಶ್ನೆಪತ್ರಿಕೆಯಲ್ಲಿ ಗೊಂದಲ ಸೃಷ್ಟಿಸಿ, ಯುವಕರ ಭವಿಷ್ಯದ ಕನಸುಗಳಿಗೆ ಕಲ್ಲು ಹಾಕಿದ್ದ ಸರ್ಕಾರ ಈಗ ಮತ್ತೊಮ್ಮೆ ಅದೇ ತಪ್ಪನ್ನು ಪುನರಾರ್ವತಿಸಿದೆ. ರಾಜ್ಯದಾದ್ಯಂತ ನಡೆಸಲಾದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಮತ್ತೊಮ್ಮೆ ಎಡವಟ್ಟು ಮಾಡಿದೆ. ಅದಲ್ಲದೇ ಕೆಲವು ಕೇಂದ್ರಗಳಲ್ಲಿ ಒಎಂಆರ್ ಶೀಟ್, ಹಾಲ್ ಟಿಕೆಟ್ ಸಂಖ್ಯೆಯಲ್ಲಿ ಹೊಂದಾಣಿಕೆಯಾಗದೆ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ. ಪರೀಕ್ಷಾರ್ಥಿಗಳ ಕೈಗೆ ಪ್ರಶ್ನೆಪತ್ರಿಕೆ ಹೋಗುವುದಕ್ಕೂ ಮುನ್ನ ಪರಿಶೀಲಿಸುವ ಅಗತ್ಯವಿತ್ತು. ಸರಿಯಾದ ಅನುವಾದ ಮಾಡದೇ ಇರುವುದು ನಾಚಿಕೆಗೇಡಿನ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಸಾಲು ಸಾಲು ಎಡವಟ್ಟುಗಳಾಗುತ್ತಿದ್ದು, ಕೆ.ಎ.ಎಸ್ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿನ ಸಾಲು ಸಾಲು ತಪ್ಪುಗಳಿಂದಾಗಿ ನಡೆದ ಮರು ಪರೀಕ್ಷೆಯಲ್ಲಿಯೂ ಸಹ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಸಾಲು ಸಾಲು ತಪ್ಪುಗಳು ಕಂಡು ಬಂದಿವೆ ಎಂದು ಕಿಡಿಕಾರಿದೆ.
ಸಿಎಂ ಸಿದ್ದರಾಮಯ್ಯ ಕನ್ನಡದ ಹೆಸರಿನಲ್ಲಿ ರಾಜಕಾರಣ ಮಾಡುವ ನಿಮ್ಮಿಂದ ಕನ್ನಡಕ್ಕೆ ಅವಮಾನವಾಗುತ್ತಿದೆ. ಪರಿಕ್ಷಾರ್ಥಿಗಳ ಬದುಕಿನ ಜೊತೆ ಇನ್ನೆಷ್ಟು ಚೆಲ್ಲಾಟವಾಡುತ್ತಿರಾ..?? ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ನಿಮಗೆ ಯೋಗ್ಯತೆ ಇಲ್ಲವೇ..?? ಎಂದು ಪ್ರಶ್ನಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…