ಬೆಂಗಳೂರು: ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಮಿಷನ್ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿಯು ಸಿಐಡಿ ತನಿಖೆಯಲ್ಲಿ ಖರ್ಗೆ ಕುಟುಂಬದ ಪ್ರಭಾವ ಎದ್ದು ಕಾಣುತ್ತಿದೆ. ಖರ್ಗೆ ಕುಟುಂಬದ ಹಸ್ತಕ್ಷೇಪದಿಂದಾಗಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನೂ ಬಂಧಿಸಿಲ್ಲ.
ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಬರೆದಿರುವ ಡೆತ್ನೋಟ್ನಲ್ಲಿ ಪ್ರಿಯಾಂಕ್ ಖರ್ಗೆ ಸೇರಿದಂತೆ ಪ್ರಿಯಾಂಕ್ ಖರ್ಗೆಯ 9 ಮಂದಿ ಅತ್ಯಾಪ್ತರ ಹೆಸರು ಉಲ್ಲೇಖಗೊಂಡಿದೆ. ಆದರೆ ಸಿಐಡಿ ತನಿಖೆ ಆರಂಭವಾಗಿ 13 ದಿನ ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ.
ಪ್ರಕರಣದಲ್ಲಿ ಕೇವಲ ಸಚಿವರ, ಸರ್ಕಾರದ ಪ್ರಭಾವವಲ್ಲದೆ, ಎಐಸಿಸಿ ಪ್ರಭಾವವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕುಟುಂಬ ಕೇಂದ್ರೀಕೃತವಾಗಿ ತನಿಖೆ ನಡೆಸದಂತೆ ತನಿಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.
ಆದಷ್ಟು ಬೇಗ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಬೇಕು. ಸಚಿನ್ ಆತ್ಮಹತ್ಯೆಗೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…