ರಾಜ್ಯ

ಗ್ಯಾರಂಟಿ ಹೊರೆ ತಪ್ಪಿಸಲು ಸಾರಿಗೆ ಇಲಾಖೆ ಆಸ್ತಿ ಮಾರಾಟ: ಬಿಜೆಪಿ ಕಿಡಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಸಾರಿಗೆ ಇಲಾಖೆಗೆ ಕೊಡಬೇಕಾದ ಹಣ ಶಕ್ತಿ ಯೋಜನೆಗೆ ಬಳಸಿದ್ದಾರೆ. 2023-24 ಸಾಲಿನಲ್ಲಿ 1480 ಕೋಟಿ ರೂ. ಬಾಕಿ ಇದೆ. 2024-25ನೇ ಸಾಲಿನಲ್ಲಿ 360 ಕೋಟಿ ರೂ. ಬಾಕಿ ಇದ್ದು, ಈ ಹಣವನ್ನು ಸಾರಿಗೆ ನಿಗಮಕ್ಕೆ ನೀಡದೆ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಹೀಗೆ ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ಇಲಾಖೆಯನ್ನು ಮಾರಾಟಕಿಟ್ಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಭವಿಷ್ಯನಿಧಿ, ನಿವೃತ್ತ ನೌಕರರಿಗೆ ನೀಡಬೇಕಾದ ಹಣ ಬಾಕಿ, ಇಂಧನ ಇತರೆ ಬಿಲ್‌ಗಳು ಸೇರಿದಂತೆ 5614 ಕೋಟಿ. ರೂ ಹಣ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದೆ.

ಶಾಲಿನಿ ರಜನೀಶ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ದಿನದ ಇಂಧನ ವೆಚ್ಚವೇ 9.5 ಕೋಟಿ ರೂ ಆಗುತ್ತಿದೆ. ಸಿಬ್ಬಂದಿ ವೇತನ ಸೇರಿ 3650 ಕೋಟಿ ಹೊರೆಯಾಗುತ್ತಿದ್ದು, ಶೇ.15ರಷ್ಟು ಪ್ರಯಾಣ ಹೆಚ್ಚಿಸುವಂತೆ ಶಾಲಿನಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ.

ದರ ಹೆಚ್ಚಿಸಿದರೂ ಇನ್ನು 1800 ಕೋಟಿ ನಷ್ಟವಾಗಲಿದೆ. ಹಾಗಾಗಿ ನಿಗಮದ 200 ಎಕರೆ ಭೂಮಿಯನ್ನು ಆದಾಯ ಹೆಚ್ಚು ಮಾಡಲು ಬಳಸಿಕೊಳ್ಳಲು ಶಾಲಿನಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ನಿಗಮದ ಆದಾಯ ಹೆಚ್ಚಿಸಲು ಭೂಮಿಯನ್ನು ಖಾಸಗಿಗಳಿಗೆ ಮಾರಾಟ ಮಾಡಬಾರದು ಎಂದು ಬಿಜೆಪಿ ಆಗ್ರಹಿಸಿದೆ.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago