ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಸಾರಿಗೆ ಇಲಾಖೆಗೆ ಕೊಡಬೇಕಾದ ಹಣ ಶಕ್ತಿ ಯೋಜನೆಗೆ ಬಳಸಿದ್ದಾರೆ. 2023-24 ಸಾಲಿನಲ್ಲಿ 1480 ಕೋಟಿ ರೂ. ಬಾಕಿ ಇದೆ. 2024-25ನೇ ಸಾಲಿನಲ್ಲಿ 360 ಕೋಟಿ ರೂ. ಬಾಕಿ ಇದ್ದು, ಈ ಹಣವನ್ನು ಸಾರಿಗೆ ನಿಗಮಕ್ಕೆ ನೀಡದೆ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಹೀಗೆ ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ಇಲಾಖೆಯನ್ನು ಮಾರಾಟಕಿಟ್ಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಭವಿಷ್ಯನಿಧಿ, ನಿವೃತ್ತ ನೌಕರರಿಗೆ ನೀಡಬೇಕಾದ ಹಣ ಬಾಕಿ, ಇಂಧನ ಇತರೆ ಬಿಲ್ಗಳು ಸೇರಿದಂತೆ 5614 ಕೋಟಿ. ರೂ ಹಣ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದೆ.
ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ದಿನದ ಇಂಧನ ವೆಚ್ಚವೇ 9.5 ಕೋಟಿ ರೂ ಆಗುತ್ತಿದೆ. ಸಿಬ್ಬಂದಿ ವೇತನ ಸೇರಿ 3650 ಕೋಟಿ ಹೊರೆಯಾಗುತ್ತಿದ್ದು, ಶೇ.15ರಷ್ಟು ಪ್ರಯಾಣ ಹೆಚ್ಚಿಸುವಂತೆ ಶಾಲಿನಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ.
ದರ ಹೆಚ್ಚಿಸಿದರೂ ಇನ್ನು 1800 ಕೋಟಿ ನಷ್ಟವಾಗಲಿದೆ. ಹಾಗಾಗಿ ನಿಗಮದ 200 ಎಕರೆ ಭೂಮಿಯನ್ನು ಆದಾಯ ಹೆಚ್ಚು ಮಾಡಲು ಬಳಸಿಕೊಳ್ಳಲು ಶಾಲಿನಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ನಿಗಮದ ಆದಾಯ ಹೆಚ್ಚಿಸಲು ಭೂಮಿಯನ್ನು ಖಾಸಗಿಗಳಿಗೆ ಮಾರಾಟ ಮಾಡಬಾರದು ಎಂದು ಬಿಜೆಪಿ ಆಗ್ರಹಿಸಿದೆ.
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…