ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದ್ದು, ಈ ಹೊರೆಯನ್ನು ತಗ್ಗಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸಾರಿಗೆ ಇಲಾಖೆಗೆ ನೀಡಬೇಕಾದ ಸುಮಾರು 7154 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಸಾರಿಗೆ ಇಲಾಖೆಗೆ ಕೊಡಬೇಕಾದ ಹಣ ಶಕ್ತಿ ಯೋಜನೆಗೆ ಬಳಸಿದ್ದಾರೆ. 2023-24 ಸಾಲಿನಲ್ಲಿ 1480 ಕೋಟಿ ರೂ. ಬಾಕಿ ಇದೆ. 2024-25ನೇ ಸಾಲಿನಲ್ಲಿ 360 ಕೋಟಿ ರೂ. ಬಾಕಿ ಇದ್ದು, ಈ ಹಣವನ್ನು ಸಾರಿಗೆ ನಿಗಮಕ್ಕೆ ನೀಡದೆ ಯೋಜನೆಗಳಿಗೆ ಬಳಸಿಕೊಂಡಿದ್ದಾರೆ. ಹೀಗೆ ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ಇಲಾಖೆಯನ್ನು ಮಾರಾಟಕಿಟ್ಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಭವಿಷ್ಯನಿಧಿ, ನಿವೃತ್ತ ನೌಕರರಿಗೆ ನೀಡಬೇಕಾದ ಹಣ ಬಾಕಿ, ಇಂಧನ ಇತರೆ ಬಿಲ್ಗಳು ಸೇರಿದಂತೆ 5614 ಕೋಟಿ. ರೂ ಹಣ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದೆ.
ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ದಿನದ ಇಂಧನ ವೆಚ್ಚವೇ 9.5 ಕೋಟಿ ರೂ ಆಗುತ್ತಿದೆ. ಸಿಬ್ಬಂದಿ ವೇತನ ಸೇರಿ 3650 ಕೋಟಿ ಹೊರೆಯಾಗುತ್ತಿದ್ದು, ಶೇ.15ರಷ್ಟು ಪ್ರಯಾಣ ಹೆಚ್ಚಿಸುವಂತೆ ಶಾಲಿನಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಿದ್ದಾರೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ.
ದರ ಹೆಚ್ಚಿಸಿದರೂ ಇನ್ನು 1800 ಕೋಟಿ ನಷ್ಟವಾಗಲಿದೆ. ಹಾಗಾಗಿ ನಿಗಮದ 200 ಎಕರೆ ಭೂಮಿಯನ್ನು ಆದಾಯ ಹೆಚ್ಚು ಮಾಡಲು ಬಳಸಿಕೊಳ್ಳಲು ಶಾಲಿನಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ನಿಗಮದ ಆದಾಯ ಹೆಚ್ಚಿಸಲು ಭೂಮಿಯನ್ನು ಖಾಸಗಿಗಳಿಗೆ ಮಾರಾಟ ಮಾಡಬಾರದು ಎಂದು ಬಿಜೆಪಿ ಆಗ್ರಹಿಸಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…