ರಾಜ್ಯ

ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗೆ ಟಾಂಗ್‌ ಕೊಟ್ಟ ರಾಮಲಿಂಗಾರೆಡ್ಡಿ

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದಾಗ ಕೂಡ ಬಸ್‌ ಟಿಕೆಟ್‌ ದರ ಏರಿಕೆ ಆಗಿದೆ ಎಂದು ಟಾಂಗ್‌ ನೀಡಿದ್ದಾರೆ.

ಜನವರಿ.5ರಿಂದ ರಾಜ್ಯದಲ್ಲಿ ಬಸ್‌ ಟಿಕೆಟ್‌ ದರ ಏರಿಕೆಯಾಗಲಿರುವ ಬಗ್ಗೆ ಈಗಾಗಲೇ ಸರ್ಕಾರ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಟಿಕೆಟ್‌ ದರ ಏರಿಕೆ ಮಾಡುವುದು ಬೇಡ ಎಂದು ಆಗ್ರಹಿಸುತ್ತಿದ್ದಾರೆ.

ಈ ಬೆನ್ನಲ್ಲೇ ಬಿಜೆಪಿ ನಾಯಕರ ಪ್ರತಿಭಟನೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದಾಗಿನಿಂದಲೂ ರೂಪಾಯಿ ಮೌಲ್ಯ ಕಡಿಮೆಯಾಗಿದೆ. ಡಾಲರ್‌ ಬೆಲೆ ಕಡಿಮೆಯಾದರೂ ಕಳೆದ 9 ವರ್ಷಗಳಿಂದ ಪೆಟ್ರೋಲ್‌, ಡೀಸೆಲ್‌ ದರ ಇಳಿಸಿಲ್ಲ. 2020ರ ಬಿಜೆಪಿ ಆಡಳಿತದ ಅವಧಿಯಲ್ಲಿ ಬಸ್‌ ಪ್ರಯಾಣ ದರ ಏರಿಕೆ ಆಗಿತ್ತು. ಆಗ ಜನರ ತೊಂದರೆ ನಿಮಗೆ ತಿಳಿಯಲಿಲ್ಲವೇ ಎಂದು ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲೇ ಪ್ರಯಾಣ ದರ ಕಡಿಮೆ ಇದೆ. ಬಿಜೆಪಿ ನಾಯಕರು ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಕೆಲಸ ಮಾಡುವುದನ್ನು ಬಿಜೆಪಿಯವರು ಮೊದಲು ಬಿಡಬೇಕು ಎಂದು ವಾಗ್ದಾಳಿ ನಡೆಸಿದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

6 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

6 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

6 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

6 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

6 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

6 hours ago