ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ್ ಹೇಳಿದರು.
ನಗರದಲ್ಲಿಂದು (ಜುಲೈ.9) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಅನುಕೂಲದ ಆಧಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿವೇಶನ ಪಡೆದಿದ್ದಾರೆ. ಮುಡಾದಲ್ಲಿ ಭಾರೀ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕನಾಗಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗಲೂ ಸಾಕಷ್ಟು ಹಗರಣಗಳನ್ನು ಮಾಡಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯ ಅವರ ಬಂಡತನ, ಹಗಲು ದರೋಡೆ ಜನರಿಗೆಲ್ಲಾ ಗೊತ್ತಾಗಿದೆ. ಅವರು ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ಒಪ್ಪಿಸಲು ತಯಾರಿಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಮುಡಾ ಅಕ್ರಮದಲ್ಲಿ ಪಾರದರ್ಶಕ ತನಿಖೆಗೆ ಆಗ್ರಹಿಸಿ ಮೈಸೂರಿನಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಜುಲೈ. 12ರಂದು ಮೈಸೂರಲ್ಲಿ ಹೋರಾಟ ನಡೆಸಲಾಗುವುದು ಎಂದು ಅಶ್ವಥ್ ನಾರಾಯಣ್ ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…