ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸರಿದೂಗಿಸಲು ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀರ ಕಷ್ಟ ಪಡುವ ಸ್ಥಿತಿ ಎದುರಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಯಾವ ಯಾವ ವಿಷಯಗಳನ್ನು ಇಟ್ಟುಕೊಂಡು ಹೋರಾಟ ಮುಂದುವರಿಸಲಿದೆ ಎಂಬುದರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ನೀಡಿದ್ದೇವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಹಾಲಿನ ದರ ಏರಿಕೆ ಹಾಗೂ ರಾಜ್ಯ ಸರ್ಕಾರದ ಅವ್ಯವಹಾರದ ವಿರುದ್ಧ ನಮ್ಮ ಹೋರಾಟ ನಿರಂತರ. ಈ ಎಲ್ಲಾ ಮಾಹಿತಿಗಳನ್ನು ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ರವಾನಿಸಿದ್ದೇವೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಸಾಮಾನ್ಯ ಜನತೆ ತೀರ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಗ್ಯಾರಂಟಿ ಯೋಜನೆ ಸರಿದೂಗಿಸಲು ಈ ರೀತಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಏನನ್ನೂ ಮಾತನಾಡದೇ ಅಸಹಾಯಕರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನೂ ಮುಸ್ಲಿಂ ಮತಗಳಿಂದಲೇ ಬೀದರ್ನಲ್ಲಿ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ ಎಂಬ ಜಮೀರ್ ಅಹಮ್ಮದ್ ಹೇಳಿಕೆಗೆ ಕೆಂಡಾಮಂಡಲರಾದ ಅವರು, ಸಚಿವರ ಬಾಯಲ್ಲಿ ಈ ರೀತಿಯ ಹೇಳಿಕೆಯನ್ನು ನಾವು ಊಹಿಸಿರಲಿಲ್ಲ. ಜಮೀರ್ ಅಹಮ್ಮದ್ ಸಚಿವ ಸ್ಥಾನದಲ್ಲಿರಲು ನಾಲಾಯಕ್ ಎಂದು ಕಿಡಿಕಾರಿದರು.
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…