ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸರಿದೂಗಿಸಲು ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀರ ಕಷ್ಟ ಪಡುವ ಸ್ಥಿತಿ ಎದುರಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಯಾವ ಯಾವ ವಿಷಯಗಳನ್ನು ಇಟ್ಟುಕೊಂಡು ಹೋರಾಟ ಮುಂದುವರಿಸಲಿದೆ ಎಂಬುದರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ನೀಡಿದ್ದೇವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಹಾಲಿನ ದರ ಏರಿಕೆ ಹಾಗೂ ರಾಜ್ಯ ಸರ್ಕಾರದ ಅವ್ಯವಹಾರದ ವಿರುದ್ಧ ನಮ್ಮ ಹೋರಾಟ ನಿರಂತರ. ಈ ಎಲ್ಲಾ ಮಾಹಿತಿಗಳನ್ನು ಗೃಹ ಸಚಿವ ಅಮಿತ್ ಶಾಗೆ ಮಾಹಿತಿ ರವಾನಿಸಿದ್ದೇವೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಸಾಮಾನ್ಯ ಜನತೆ ತೀರ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಗ್ಯಾರಂಟಿ ಯೋಜನೆ ಸರಿದೂಗಿಸಲು ಈ ರೀತಿ ಬೆಲೆ ಏರಿಕೆ ಮಾಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಏನನ್ನೂ ಮಾತನಾಡದೇ ಅಸಹಾಯಕರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನೂ ಮುಸ್ಲಿಂ ಮತಗಳಿಂದಲೇ ಬೀದರ್ನಲ್ಲಿ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ ಎಂಬ ಜಮೀರ್ ಅಹಮ್ಮದ್ ಹೇಳಿಕೆಗೆ ಕೆಂಡಾಮಂಡಲರಾದ ಅವರು, ಸಚಿವರ ಬಾಯಲ್ಲಿ ಈ ರೀತಿಯ ಹೇಳಿಕೆಯನ್ನು ನಾವು ಊಹಿಸಿರಲಿಲ್ಲ. ಜಮೀರ್ ಅಹಮ್ಮದ್ ಸಚಿವ ಸ್ಥಾನದಲ್ಲಿರಲು ನಾಲಾಯಕ್ ಎಂದು ಕಿಡಿಕಾರಿದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…