ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲೆ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಜನರಿಗೆ ಏನೂ ಉಪಯೋಗವಲ್ಲದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದೆ. ಈಗ ಹಾಲಿನ ಬೆಲೆ ಏರಿಕೆ ಮಾಡಲಾಗಿದ್ದು, ಜನಸಾಮಾನ್ಯರ ಹೊಟ್ಟೆಯ ಮೇಲೆ ಬರೆ ಎಳೆದಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ.
ಸರ್ಕಾರ ಹಾಲಿನ ದರ ಏರಿಕೆ ಮಾಡಿರುವ ಬಗ್ಗೆ ಬೆಂಗಳೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ದಿನೇ ದಿನೇ ಯಾವುದಾದರೊಂದು ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬರಲಾಗುತ್ತಿದೆ. ಬೆಲೆ ಏರಿಕೆಗೆ ಮೂಲ ಕಾರಣವೇ ಗ್ಯಾರಂಟಿ ಯೋಜನೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗದೇ ರಾಜ್ಯ ಸರ್ಕಾರ ಈ ರೀತಿಯ ಆಟವಾಡುತ್ತಿದೆ. ಯಾವುದೇ ಮುಂದಾಲೋಚನೆ ಇಲ್ಲದೆಯೇ ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗ ಜನಸಾಮಾನ್ಯರು ನರಳುವಂತೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಹಾಲಿನ ಬೆಲೆ ಏರಿಕೆ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ. ಜುಲೈ.3 ಅಥವಾ 4ರಂದು ನಮ್ಮ ನಾಯಕರುಗಳೆಲ್ಲಾ ಸೇರಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಅಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡಿದರು. ಹಾಲಿನ ದರ ಇಳಿಕೆ ಮಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದ್ದು, ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…