ಮೈಸೂರು: ವಿಪಕ್ಷ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ವಿಚಾರವಾಗಿ ಬಿಜೆಪಿ ನಾಯಕರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೀಸಲಾತಿ ಹೇಳಿಕೆಯನ್ನು ಖಂಡಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.
ಈ ಕುರಿತು ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮರ್ ಮಾತನಾಡಿ, ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ನಾಳೆ ಪ್ರತಿಭಟಿಸಲಿದೆ. ರಾಹುಲ್ ಈ ಕೂಡಲೇ ದೇಶದ ಜನರ ಕ್ಷಮೆ ಕೇಳಬೇಕು. ರಾಹುಲ್ ಅವರ ಮೀಸಲಾತಿ ರದ್ದು ಹೇಳಿಕೆಯಿಂದ ದೇಶದ ಎಸ್ಸಿ, ಎಸ್ಟಿ ಸಮುದಾಯ ಗಾಬರಿಯಾಗಿದೆ ಎಂದು ರಾಹುಲ್ ವಿರುದ್ಧ ವಗ್ದಾಳಿ ನಡೆಸಿದರು.
ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಪ್ರತಿಕ್ರಿಯಿಸಿ, ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯರನ್ನು ಪ್ರಶ್ನೆ ಮಾಡುತ್ತೇನೆ. ಸಂವಿಧಾನ ರಕ್ಷಣೆ ಮಾಡುತ್ತೇವೆ, ಮೀಸಲಾತಿ ಉಳಿಸುತ್ತೇವೆ ಎಂದು ಬೊಬ್ಬೆ ಹೊಡೆಯುವ ನೀವುಗಳು, ಇದಕ್ಕೆ ಏನು ಹೇಳುವಿರಿ. ರಾಹುಲ್ ಗಾಂಧಿ ಮೀಸಲಾತಿ ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಗೆ ನಾಚಿಕೆ ಆಗಬೇಕು. ನಾಳೆ ನಾಡಿದ್ದು ರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡುತ್ತೇವೆ. ಅಂಬೇಡ್ಕರ್ ಸೋಲಿಸಿದ್ದ ಇದೇ ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…