Mysore
30
broken clouds

Social Media

ಸೋಮವಾರ, 30 ಮಾರ್ಚ್ 2026
Light
Dark

18 ಶಾಸಕರ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್‌ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದಿದ್ದಾರೆ.

ಸರ್ವಾಧಿಕಾರಿಯಂತೆ ವರ್ತಿಸಿ ನಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್‌ ವಿರುದ್ಧ ಮತ್ತು ಅಮಾನತನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ಇಂದು(ಏಪ್ರಿಲ್‌.2) ಪಕ್ಷದ ಶಾಸಕರೊಂದಿಗೆ ವಿಧಾನಸೌಧದ ಎದುರು ಕೆಂಗಲ್‌ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರಜಾಪ್ರಭುತ್ವದ ದೇಗುಲದಲ್ಲೇ ಜನಪ್ರತಿನಿಧಿಗಳ ಬಾಯಿ ಮುಚ್ಚಿಸಿ ಹೊರಹಾಕುವ ನಿರ್ಧಾರ ಪ್ರಜಾತಂತ್ರ ವ್ಯವಸ್ಥೆಯ ಮೇಲಿನ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್ಸಿಗರಿಗೆ ವಿರೋಧ ಪಕ್ಷಗಳ ದನಿ ಅಡಗಿಸುವ ವಿಧಾನ ಕರತಲಾಮಲಕವಾಗಿದೆ. ಸ್ಪೀಕರ್ ಅವರು ಈ ಕೂಡಲೇ ಅಮಾನತ್ತನ್ನು ರದ್ದುಗೊಳಿಸಿ ಶಾಸಕತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಜಂಟಿ ಕಾರ್ಯದರ್ಶಿಗಳ ಮೂಲಕ ವಿಧಾನಸಭಾ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.

Tags:
error: Content is protected !!