ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದಿದ್ದಾರೆ.
ಸರ್ವಾಧಿಕಾರಿಯಂತೆ ವರ್ತಿಸಿ ನಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ವಿರುದ್ಧ ಮತ್ತು ಅಮಾನತನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು(ಏಪ್ರಿಲ್.2) ಪಕ್ಷದ ಶಾಸಕರೊಂದಿಗೆ ವಿಧಾನಸೌಧದ ಎದುರು ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರಜಾಪ್ರಭುತ್ವದ ದೇಗುಲದಲ್ಲೇ ಜನಪ್ರತಿನಿಧಿಗಳ ಬಾಯಿ ಮುಚ್ಚಿಸಿ ಹೊರಹಾಕುವ ನಿರ್ಧಾರ ಪ್ರಜಾತಂತ್ರ ವ್ಯವಸ್ಥೆಯ ಮೇಲಿನ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್ಸಿಗರಿಗೆ ವಿರೋಧ ಪಕ್ಷಗಳ ದನಿ ಅಡಗಿಸುವ ವಿಧಾನ ಕರತಲಾಮಲಕವಾಗಿದೆ. ಸ್ಪೀಕರ್ ಅವರು ಈ ಕೂಡಲೇ ಅಮಾನತ್ತನ್ನು ರದ್ದುಗೊಳಿಸಿ ಶಾಸಕತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಜಂಟಿ ಕಾರ್ಯದರ್ಶಿಗಳ ಮೂಲಕ ವಿಧಾನಸಭಾ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…