ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಅನ್ನು ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಪಕ್ಷ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಖಂಡನೀಯ ಎಂದಿದ್ದಾರೆ.
ಸರ್ವಾಧಿಕಾರಿಯಂತೆ ವರ್ತಿಸಿ ನಮ್ಮ ಪಕ್ಷದ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ವಿರುದ್ಧ ಮತ್ತು ಅಮಾನತನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು(ಏಪ್ರಿಲ್.2) ಪಕ್ಷದ ಶಾಸಕರೊಂದಿಗೆ ವಿಧಾನಸೌಧದ ಎದುರು ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರಜಾಪ್ರಭುತ್ವದ ದೇಗುಲದಲ್ಲೇ ಜನಪ್ರತಿನಿಧಿಗಳ ಬಾಯಿ ಮುಚ್ಚಿಸಿ ಹೊರಹಾಕುವ ನಿರ್ಧಾರ ಪ್ರಜಾತಂತ್ರ ವ್ಯವಸ್ಥೆಯ ಮೇಲಿನ ದಬ್ಬಾಳಿಕೆಯ ಕ್ರಮವಾಗಿದೆ ಎಂದು ಹೇಳಿದ್ದಾರೆ.
ತುರ್ತು ಪರಿಸ್ಥಿತಿ ಹೇರಿದ ಕುಖ್ಯಾತಿಯ ಕಾಂಗ್ರೆಸ್ಸಿಗರಿಗೆ ವಿರೋಧ ಪಕ್ಷಗಳ ದನಿ ಅಡಗಿಸುವ ವಿಧಾನ ಕರತಲಾಮಲಕವಾಗಿದೆ. ಸ್ಪೀಕರ್ ಅವರು ಈ ಕೂಡಲೇ ಅಮಾನತ್ತನ್ನು ರದ್ದುಗೊಳಿಸಿ ಶಾಸಕತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಜಂಟಿ ಕಾರ್ಯದರ್ಶಿಗಳ ಮೂಲಕ ವಿಧಾನಸಭಾ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…