ರಾಜ್ಯ

ನುಂಗಣ್ಣ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿಂದು (ಜೂನ್‌.17) ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್‌ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಮೂರು ರೂಪಾಯಿ ಹೆಚ್ಚು ಮಾಡಿದ ಕಾಂಗ್ರೆಸ್‌ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಈಗ ಸಿದ್ದರಾಮಯ್ಯ ಎಂದರೆ ನುಂಗಣ್ಣ ಎಂದು ವ್ಯಂಗ್ಯವಾಡಿದರು.

ತೈಲ ಬೆಲೆ ಏರಿಯಾದರೆ ಸಿಮೆಂಟ್‌, ತರಕಾರಿ ಎಲ್ಲ ಬೆಲೆಯೂ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಯಾವ ಬೆಲೆಗಳು ಹೆಚ್ಚಲಿದೆ ಎಂದು ತಿಳಿಸಲಿ. ಗ್ಯಾರಂಟಿ ಯೋಜನೆಗಳೆಂದು ಹೇಳಿ ಎಲ್ಲರಿಗೂ ಒಂದು ಲಕ್ಷ, ಎರಡು ಸಾವಿರ ಕೋಡುತ್ತೇವೆ ಎಂದರು. ರಾಹುಲ್‌ ಗಾಂಧಿ ಇನ್ನೂ ಮುಂದೆ ಹೋಗಿ ಟಕಾಟಕ್‌ ಎಂದು ಹಾಕುತ್ತೇನೆ ಎಂದರು. ಆದರೆ ಟಕಾಟಕ್‌ ಎಂದು ಜೇಬಿಗೆ ಕತ್ತರಿ ಹಾಕಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಬಸ್‌ ಟಿಕೆಟ್‌ ದರ ಏರಿಕೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದು, ಟಿಕೆಟ್‌ ದರ ಶೇ.12 ರಷ್ಟು ಹೆಚ್ಚಿಸಲು ಚರ್ಚೆಯಾಗಿದೆ. ಕಾಫಿ ಟೀ ದರ ಕೂಡ ಹೆಚ್ಚಲಿದೆ. ಕಾಂಗ್ರೆಸ್‌ ಸತ್ತರೆ ತಿಥಿಗೆ ಮಾಡುವ ಉದ್ದಿನ ವಡೆಯ ಬೆಲೆ ಕೂಡ ಹೆಚ್ಚಾಗಲಿದೆ ಎಂದರು.

ಗ್ಯಾರಂಟಿಗೆ 55,000 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದಿದ್ದರು. ಬಳಿಕ ನಮ್ಮದೇ ಹಣವನ್ನು ದರೋಡೆ ಮಾಡಿ ನಮಗೆ ಮರಳಿ ನೀಡುತ್ತಿದ್ದಾರೆ. ಈಗ ಚುನಾವಣೆ ನಡೆದರೆ ಕಾಂಗ್ರೆಸ್‌ ಠೇವಣಿ ಕಳೆದುಕೊಳ್ಳಲಿದೆ. ಲೋಕಸಭಾ ಚುನಾವಣೆಯಲ್ಲಿ 143 ಕ್ಷೇತ್ರ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲೂ ಹೆಚ್ಚು ಮತಗಳು ಬಿಜೆಪಿಗೆ ಬಂದಿದೆ ಎಂದರು.

ದಲಿತರ ಹಣ ನುಂಗಿದ ಸಿಎಂ: ದಲಿತರ 187 ಕೋಟಿ ರೂಪಾಯಿ ನುಂಗಿ ಸಚಿವ ಬಿ.ನಾಗೇಂದ್ರ ಔಟ್‌ ಆಗಿದ್ದಾರೆ. ಇನ್ನು ಎರಡನೇ ವಿಕೆಟ್‌ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿದೆ. ಸಚಿವ ನಾಗೇಂದ್ರ 20 ಪರ್ಸೆಂಟ್‌ ಜೇನು ಕಿತ್ತಿದ್ದು ಮಾತ್ರ, ಆದರೆ 80 ಪರ್ಸೆಂಟ್‌ ಜೇನನ್ನು ಸಿಎಂ ಸಿದ್ದರಾಮಯ್ಯ ಹೊಡೆದಿದ್ದಾರೆ. ಈ ಹಣ ತೆಲಂಗಾಣಕ್ಕೆ ಹೋಗಿ, ಬಳಿಕ ಬಾರ್‌ಗಳಿಗೆ ಹೋಗಿದೆ. ದಲಿತರ ಉದ್ಯಮಗಳಿಗೆ, ಅಂಗಡಿಗಳಿಗೆ, ಅವರ ಮಕ್ಕಳ ಸ್ಕಾಲರ್‌ಶಿಪ್‌ಗೆ ಈ ಹಣ ಕೊಡಬೇಕಿತ್ತು. ಚೆಕ್‌ನಲ್ಲೇ ಹಗಲು ದರೋಡೆ ಮಾಡಿದ್ದಾರೆ. ಇದರಿಂದಾಗಿ ನಿಷ್ಠಾವಂತ ಅಧಿಕಾರಿ ಸತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಬಂಡವಾಳ ಬಯಲು ಮಾಡುತ್ತೇವೆ: ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ಧ ಹಾಗೂ ಸರ್ಕಾರದ ಬಂಡವಾಳ ಬಯಲು ಮಾಡಲು ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆಯನ್ನು ದಿವಾಳಿಯಾಗಿಸಿದ್ದಾರೆ. ಸಾಲ ಪಡೆಯಲು ಬಿಬಿಎಂಪಿ ಕಚೇರಿಗಳನ್ನು ಅಡಮಾನ ಇಡಲು ಮುಂದಾಗಿದ್ದಾರೆ. ಹೀಗೆಯೇ ಬಿಟ್ಟರೆ ವಿಧಾನಸೌಧವನ್ನೂ ಅಡ ಇಡುತ್ತಾರೆ. ಎಲ್ಲರೂ ದಂಗೆ ಎದ್ದು ಈ ಸರ್ಕಾರವನ್ನು ಕಿತ್ತು ಹಾಕಬೇಕಿದೆ ಎಂದು ಕರೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

54 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

1 hour ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago