ರಾಜ್ಯ

ಹನಿಟ್ರ್ಯಾಪ್‌ ಬಾಂಬ್ ಸಿಡಿಸಿದ ಸಚಿವರೇ ಈ‌ಗ ಥಂಡಾ ಹೊಡೆದಿದ್ದಾರೆ: ಬಿಜೆಪಿ ವ್ಯಂಗ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸರ್ಕಾರದ ಸಚಿವರು ಈಗ ಥಂಡಾ ಹೊಡೆದಿದ್ದಾರೆ. ಮಾನವನ್ನು ಪಣಕ್ಕಿಟ್ಟಾದರೂ ರಾಜಕೀಯದಲ್ಲಿ ಉಸಿರಾಡಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಸರಿಸಾಟಿ ಎಂದು ಟೀಕಿಸಿದೆ.

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಬಗ್ಗು ಬಡಿಯಲು ಸಿಎಂ ಸಿದ್ದರಾಮಯ್ಯ ಬಣ ಹನಿಟ್ರ್ಯಾಪ್‌ ದಾಳ ಉರುಳಿಸಿದೆ. ಆ ಮೂಲಕ ಮಾನ ಹೋದರೂ ಪರವಾಗಿಲ್ಲ ಸಿಎಂ ಕುರ್ಚಿ ಬಿಡೆವು ಎಂಬ ಸ್ಪಷ್ಟ ಸಂದೇಶವನ್ನು ಸಿದ್ದರಾಮಯ್ಯ ಬಣ ರವಾನಿಸಿದೆ. ಕಾಂಗ್ರೆಸ್‌ ಪಕ್ಷದೊಳಗಿನ ಕುರ್ಚಿ ಕಿತ್ತಾಟದ ಮುಂದುವರಿದ ಭಾಗವೇ ಹನಿಟ್ರ್ಯಾಪ್‌ ಪ್ರಕರಣ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯ ನಿಸ್ತೇಜವಾಗಿದೆ, ಅಭಿವೃದ್ಧಿ ನಿಂತು ಹೋಗಿದೆ, ಗ್ಯಾರಂಟಿಗಳು ಕುಂಟುತ್ತಾ ಸಾಗುತ್ತಿದೆ, ಬರಗಾಲ ಆವರಿಸುತ್ತದೆ ಸರ್ಕಾರ ಮಾತ್ರ ಸಿಡಿ ಬಿಡುಗಡೆ ಕಾರ್ಯಕ್ರಮವನ್ನೇ ರಾಷ್ಟ್ರೀಯ ಯೋಜನೆ ಎಂಬ ರೀತಿಯಲ್ಲಿ ಪರಿಗಣಿಸಿರುವುದು ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

5 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

6 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

6 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

7 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

7 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

8 hours ago