ರಾಜ್ಯ

ಹನಿಟ್ರ್ಯಾಪ್‌ ಬಾಂಬ್ ಸಿಡಿಸಿದ ಸಚಿವರೇ ಈ‌ಗ ಥಂಡಾ ಹೊಡೆದಿದ್ದಾರೆ: ಬಿಜೆಪಿ ವ್ಯಂಗ್ಯ

ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸರ್ಕಾರದ ಸಚಿವರು ಈಗ ಥಂಡಾ ಹೊಡೆದಿದ್ದಾರೆ. ಮಾನವನ್ನು ಪಣಕ್ಕಿಟ್ಟಾದರೂ ರಾಜಕೀಯದಲ್ಲಿ ಉಸಿರಾಡಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಸರಿಸಾಟಿ ಎಂದು ಟೀಕಿಸಿದೆ.

ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಬಗ್ಗು ಬಡಿಯಲು ಸಿಎಂ ಸಿದ್ದರಾಮಯ್ಯ ಬಣ ಹನಿಟ್ರ್ಯಾಪ್‌ ದಾಳ ಉರುಳಿಸಿದೆ. ಆ ಮೂಲಕ ಮಾನ ಹೋದರೂ ಪರವಾಗಿಲ್ಲ ಸಿಎಂ ಕುರ್ಚಿ ಬಿಡೆವು ಎಂಬ ಸ್ಪಷ್ಟ ಸಂದೇಶವನ್ನು ಸಿದ್ದರಾಮಯ್ಯ ಬಣ ರವಾನಿಸಿದೆ. ಕಾಂಗ್ರೆಸ್‌ ಪಕ್ಷದೊಳಗಿನ ಕುರ್ಚಿ ಕಿತ್ತಾಟದ ಮುಂದುವರಿದ ಭಾಗವೇ ಹನಿಟ್ರ್ಯಾಪ್‌ ಪ್ರಕರಣ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯ ನಿಸ್ತೇಜವಾಗಿದೆ, ಅಭಿವೃದ್ಧಿ ನಿಂತು ಹೋಗಿದೆ, ಗ್ಯಾರಂಟಿಗಳು ಕುಂಟುತ್ತಾ ಸಾಗುತ್ತಿದೆ, ಬರಗಾಲ ಆವರಿಸುತ್ತದೆ ಸರ್ಕಾರ ಮಾತ್ರ ಸಿಡಿ ಬಿಡುಗಡೆ ಕಾರ್ಯಕ್ರಮವನ್ನೇ ರಾಷ್ಟ್ರೀಯ ಯೋಜನೆ ಎಂಬ ರೀತಿಯಲ್ಲಿ ಪರಿಗಣಿಸಿರುವುದು ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

34 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago