ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್ ಬಾಂಬ್ ಸಿಡಿಸಿದ ಕಾಂಗ್ರೆಸ್ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್ ಬಾಂಬ್ ಸಿಡಿಸಿದ ಕಾಂಗ್ರೆಸ್ ಸರ್ಕಾರದ ಸಚಿವರು ಈಗ ಥಂಡಾ ಹೊಡೆದಿದ್ದಾರೆ. ಮಾನವನ್ನು ಪಣಕ್ಕಿಟ್ಟಾದರೂ ರಾಜಕೀಯದಲ್ಲಿ ಉಸಿರಾಡಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಸರಿಸಾಟಿ ಎಂದು ಟೀಕಿಸಿದೆ.
ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗು ಬಡಿಯಲು ಸಿಎಂ ಸಿದ್ದರಾಮಯ್ಯ ಬಣ ಹನಿಟ್ರ್ಯಾಪ್ ದಾಳ ಉರುಳಿಸಿದೆ. ಆ ಮೂಲಕ ಮಾನ ಹೋದರೂ ಪರವಾಗಿಲ್ಲ ಸಿಎಂ ಕುರ್ಚಿ ಬಿಡೆವು ಎಂಬ ಸ್ಪಷ್ಟ ಸಂದೇಶವನ್ನು ಸಿದ್ದರಾಮಯ್ಯ ಬಣ ರವಾನಿಸಿದೆ. ಕಾಂಗ್ರೆಸ್ ಪಕ್ಷದೊಳಗಿನ ಕುರ್ಚಿ ಕಿತ್ತಾಟದ ಮುಂದುವರಿದ ಭಾಗವೇ ಹನಿಟ್ರ್ಯಾಪ್ ಪ್ರಕರಣ ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದೆ.
ರಾಜ್ಯ ನಿಸ್ತೇಜವಾಗಿದೆ, ಅಭಿವೃದ್ಧಿ ನಿಂತು ಹೋಗಿದೆ, ಗ್ಯಾರಂಟಿಗಳು ಕುಂಟುತ್ತಾ ಸಾಗುತ್ತಿದೆ, ಬರಗಾಲ ಆವರಿಸುತ್ತದೆ ಸರ್ಕಾರ ಮಾತ್ರ ಸಿಡಿ ಬಿಡುಗಡೆ ಕಾರ್ಯಕ್ರಮವನ್ನೇ ರಾಷ್ಟ್ರೀಯ ಯೋಜನೆ ಎಂಬ ರೀತಿಯಲ್ಲಿ ಪರಿಗಣಿಸಿರುವುದು ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…