ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಪರ ಮತ ಕೇಳುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಮತಯಾಚನೆ ವೇಳೆ ಅಲ್ಲಿನ ನಿವಾಸಿಗಳಿಗೆ ಬ್ಲ್ಯಾಕ್ಮೇಲ್ ಮಾಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ರಾಜ್ಯ ಬಿಜೆಪಿ ಘಟಕ ಈ ವಿಡಿಯೋವನ್ನು ಟ್ವೀಟ್ ಮಾಡಿ, ಆಕ್ರೋಶ ಹೊರ ಹಾಕಿದೆ.
ಡಿಕೆ ಶಿವಕುಮಾರ್ ವಿಡಿಯೋದಲ್ಲಿ ಹೇಳಿದ್ದೇನು?
“ನಿಮಗೆ ನಾನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ. ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಬೂತ್ ಆರ್ಆರ್ ನಗರದಲ್ಲಿದೆ. 2-3 ಬೂತ್ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್ ಮಾತ್ರ. ಈಗ ಹೇಳಿ ಏನು ಮಾಡುತ್ತೀರ? ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಿಡಿಎ ಸಚಿವ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಬೆಂಗಳೂರು ಜಲಮಂಡಳಿ ಸಚಿವನಿದ್ದೇನೆ. ಈ ಎಲ್ಲವೂ ನಿಮ್ಮ ಪಾಕೆಟ್ನಲ್ಲಿವೆ. ಏನೆ ಸಮಸ್ಯೆಯಿದ್ದರೂ ನೀವು ಮುಖ್ಯಮಂತ್ರಿಗಳ ಮನೆಗೆ ಹೋಗಬೇಕಿಲ್ಲ. ನನ್ನ ಮನೆಗೆ ಬನ್ನಿ. ನಾನು ನಿಮಗೆ ಸಹಾಯ ಮಾಡುತ್ತೇನೆ. ನಾನು ನಿಮ್ಮ ಕೈಯಲ್ಲಿದ್ದೇನೆ. ಈಗ ಹೇಳಿ ನನಗೆ ನೀವು ಹೇಗೆ ಸಹಾಯ ಮಾಡುತ್ತೀರಾ? ನಮಗೆ ಭರವಸೆ ನೀಡಿ, ನನಗೆ ಮತ ಹಾಕಿ. ನಾನು ನಿಮಗೆ ಭರವಸೆ ನೀಡುತ್ತೇನೆ 2-3 ತಿಂಗಳಲ್ಲಿ ನಿಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸುತ್ತೇನೆ. ಇದು ನನ್ನ ತಮ್ಮನ ಲೋಕಸಭಾ ಕ್ಷೇತ್ರ, ಅಂದರೆ ನನ್ನ ಕ್ಷೇತ್ರ ಇದ್ದ ಹಾಗೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪರೋಕ್ಷವಾಗಿ ಬ್ಯ್ಲಾಕ್ಮೇಲ್ ಮಾಡಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…