ರಾಜ್ಯ

ಡಿಕೆ ಸುರೇಶ್‌ಗೆ ಮತ ಹಾಕಲು ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಡಿಕೆಶಿ ಧಮ್ಕಿ: ಬಿಜೆಪಿ ಆಕ್ರೋಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ಪರ ಮತ ಕೇಳುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಮತಯಾಚನೆ ವೇಳೆ ಅಲ್ಲಿನ ನಿವಾಸಿಗಳಿಗೆ ಬ್ಲ್ಯಾಕ್​ಮೇಲ್ ಮಾಡಿರುವ​​ ವಿಡಿಯೋ ಸದ್ಯ ವೈರಲ್​ ಆಗಿದೆ. ರಾಜ್ಯ ಬಿಜೆಪಿ ಘಟಕ ಈ ವಿಡಿಯೋವನ್ನು ಟ್ವೀಟ್​ ಮಾಡಿ, ಆಕ್ರೋಶ ಹೊರ ಹಾಕಿದೆ.

ಡಿಕೆ ಶಿವಕುಮಾರ್ ವಿಡಿಯೋದಲ್ಲಿ ಹೇಳಿದ್ದೇನು?

“ನಿಮಗೆ ನಾನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ. ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2-3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರ? ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಿಡಿಎ ಸಚಿವ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಬೆಂಗಳೂರು ಜಲಮಂಡಳಿ ಸಚಿವನಿದ್ದೇನೆ. ಈ ಎಲ್ಲವೂ ನಿಮ್ಮ ಪಾಕೆಟ್​ನಲ್ಲಿವೆ. ಏನೆ ಸಮಸ್ಯೆಯಿದ್ದರೂ ನೀವು ಮುಖ್ಯಮಂತ್ರಿಗಳ ಮನೆಗೆ ಹೋಗಬೇಕಿಲ್ಲ. ನನ್ನ ಮನೆಗೆ ಬನ್ನಿ. ನಾನು ನಿಮಗೆ ಸಹಾಯ ಮಾಡುತ್ತೇನೆ. ನಾನು ನಿಮ್ಮ ಕೈಯಲ್ಲಿದ್ದೇನೆ. ಈಗ ಹೇಳಿ ನನಗೆ ನೀವು ಹೇಗೆ ಸಹಾಯ ಮಾಡುತ್ತೀರಾ? ನಮಗೆ ಭರವಸೆ ನೀಡಿ, ನನಗೆ ಮತ ಹಾಕಿ. ನಾನು ನಿಮಗೆ ಭರವಸೆ ನೀಡುತ್ತೇನೆ 2-3 ತಿಂಗಳಲ್ಲಿ ನಿಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸುತ್ತೇನೆ. ಇದು ನನ್ನ ತಮ್ಮನ ಲೋಕಸಭಾ ಕ್ಷೇತ್ರ, ಅಂದರೆ ನನ್ನ ಕ್ಷೇತ್ರ ಇದ್ದ ಹಾಗೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪರೋಕ್ಷವಾಗಿ ಬ್ಯ್ಲಾಕ್​ಮೇಲ್​ ಮಾಡಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

11 mins ago

ಹುಲಿ ಹತ್ಯೆ ಪ್ರಕರಣ : ಮತ್ತೇ ನಾಲ್ವರ ಬಂಧನ

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು…

32 mins ago

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಪ್ಲಾಸ್ಟಿಕ್‌ ಗೋದಾಮು

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…

2 hours ago

ಅಭಿಯೋಜಕರ ಅಕಾಡೆಮಿ ಸ್ಥಾಪನೆ : ಸಿಎಂ ಭರವಸೆ

ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…

2 hours ago

ಇರಾನ್ ಆರ್ಥಿಕ ಬಿಕ್ಕಟ್ಟು | 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ ; 200ಕ್ಕೂ ಹೆಚ್ಚು ಮಂದಿ ಬಲಿ

ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…

3 hours ago

ಹುಲಿ ದಾಳಿಗೆ ಹಸು ಗಾಯ ; ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ…

3 hours ago