ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಪರ ಮತ ಕೇಳುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಮತಯಾಚನೆ ವೇಳೆ ಅಲ್ಲಿನ ನಿವಾಸಿಗಳಿಗೆ ಬ್ಲ್ಯಾಕ್ಮೇಲ್ ಮಾಡಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ರಾಜ್ಯ ಬಿಜೆಪಿ ಘಟಕ ಈ ವಿಡಿಯೋವನ್ನು ಟ್ವೀಟ್ ಮಾಡಿ, ಆಕ್ರೋಶ ಹೊರ ಹಾಕಿದೆ.
ಡಿಕೆ ಶಿವಕುಮಾರ್ ವಿಡಿಯೋದಲ್ಲಿ ಹೇಳಿದ್ದೇನು?
“ನಿಮಗೆ ನಾನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ. ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಬೂತ್ ಆರ್ಆರ್ ನಗರದಲ್ಲಿದೆ. 2-3 ಬೂತ್ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್ ಮಾತ್ರ. ಈಗ ಹೇಳಿ ಏನು ಮಾಡುತ್ತೀರ? ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಿಡಿಎ ಸಚಿವ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಬೆಂಗಳೂರು ಜಲಮಂಡಳಿ ಸಚಿವನಿದ್ದೇನೆ. ಈ ಎಲ್ಲವೂ ನಿಮ್ಮ ಪಾಕೆಟ್ನಲ್ಲಿವೆ. ಏನೆ ಸಮಸ್ಯೆಯಿದ್ದರೂ ನೀವು ಮುಖ್ಯಮಂತ್ರಿಗಳ ಮನೆಗೆ ಹೋಗಬೇಕಿಲ್ಲ. ನನ್ನ ಮನೆಗೆ ಬನ್ನಿ. ನಾನು ನಿಮಗೆ ಸಹಾಯ ಮಾಡುತ್ತೇನೆ. ನಾನು ನಿಮ್ಮ ಕೈಯಲ್ಲಿದ್ದೇನೆ. ಈಗ ಹೇಳಿ ನನಗೆ ನೀವು ಹೇಗೆ ಸಹಾಯ ಮಾಡುತ್ತೀರಾ? ನಮಗೆ ಭರವಸೆ ನೀಡಿ, ನನಗೆ ಮತ ಹಾಕಿ. ನಾನು ನಿಮಗೆ ಭರವಸೆ ನೀಡುತ್ತೇನೆ 2-3 ತಿಂಗಳಲ್ಲಿ ನಿಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸುತ್ತೇನೆ. ಇದು ನನ್ನ ತಮ್ಮನ ಲೋಕಸಭಾ ಕ್ಷೇತ್ರ, ಅಂದರೆ ನನ್ನ ಕ್ಷೇತ್ರ ಇದ್ದ ಹಾಗೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪರೋಕ್ಷವಾಗಿ ಬ್ಯ್ಲಾಕ್ಮೇಲ್ ಮಾಡಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…
ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು…
ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು…