ರಾಜ್ಯ

ಡಿಕೆ ಸುರೇಶ್‌ಗೆ ಮತ ಹಾಕಲು ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಡಿಕೆಶಿ ಧಮ್ಕಿ: ಬಿಜೆಪಿ ಆಕ್ರೋಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ಪರ ಮತ ಕೇಳುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಮತಯಾಚನೆ ವೇಳೆ ಅಲ್ಲಿನ ನಿವಾಸಿಗಳಿಗೆ ಬ್ಲ್ಯಾಕ್​ಮೇಲ್ ಮಾಡಿರುವ​​ ವಿಡಿಯೋ ಸದ್ಯ ವೈರಲ್​ ಆಗಿದೆ. ರಾಜ್ಯ ಬಿಜೆಪಿ ಘಟಕ ಈ ವಿಡಿಯೋವನ್ನು ಟ್ವೀಟ್​ ಮಾಡಿ, ಆಕ್ರೋಶ ಹೊರ ಹಾಕಿದೆ.

ಡಿಕೆ ಶಿವಕುಮಾರ್ ವಿಡಿಯೋದಲ್ಲಿ ಹೇಳಿದ್ದೇನು?

“ನಿಮಗೆ ನಾನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ. ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2-3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರ? ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಿಡಿಎ ಸಚಿವ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಬೆಂಗಳೂರು ಜಲಮಂಡಳಿ ಸಚಿವನಿದ್ದೇನೆ. ಈ ಎಲ್ಲವೂ ನಿಮ್ಮ ಪಾಕೆಟ್​ನಲ್ಲಿವೆ. ಏನೆ ಸಮಸ್ಯೆಯಿದ್ದರೂ ನೀವು ಮುಖ್ಯಮಂತ್ರಿಗಳ ಮನೆಗೆ ಹೋಗಬೇಕಿಲ್ಲ. ನನ್ನ ಮನೆಗೆ ಬನ್ನಿ. ನಾನು ನಿಮಗೆ ಸಹಾಯ ಮಾಡುತ್ತೇನೆ. ನಾನು ನಿಮ್ಮ ಕೈಯಲ್ಲಿದ್ದೇನೆ. ಈಗ ಹೇಳಿ ನನಗೆ ನೀವು ಹೇಗೆ ಸಹಾಯ ಮಾಡುತ್ತೀರಾ? ನಮಗೆ ಭರವಸೆ ನೀಡಿ, ನನಗೆ ಮತ ಹಾಕಿ. ನಾನು ನಿಮಗೆ ಭರವಸೆ ನೀಡುತ್ತೇನೆ 2-3 ತಿಂಗಳಲ್ಲಿ ನಿಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸುತ್ತೇನೆ. ಇದು ನನ್ನ ತಮ್ಮನ ಲೋಕಸಭಾ ಕ್ಷೇತ್ರ, ಅಂದರೆ ನನ್ನ ಕ್ಷೇತ್ರ ಇದ್ದ ಹಾಗೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪರೋಕ್ಷವಾಗಿ ಬ್ಯ್ಲಾಕ್​ಮೇಲ್​ ಮಾಡಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

14 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago