ರಾಜ್ಯ

ಡಿಕೆ ಸುರೇಶ್‌ಗೆ ಮತ ಹಾಕಲು ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಡಿಕೆಶಿ ಧಮ್ಕಿ: ಬಿಜೆಪಿ ಆಕ್ರೋಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಅವರ ಪರ ಮತ ಕೇಳುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಮತಯಾಚನೆ ವೇಳೆ ಅಲ್ಲಿನ ನಿವಾಸಿಗಳಿಗೆ ಬ್ಲ್ಯಾಕ್​ಮೇಲ್ ಮಾಡಿರುವ​​ ವಿಡಿಯೋ ಸದ್ಯ ವೈರಲ್​ ಆಗಿದೆ. ರಾಜ್ಯ ಬಿಜೆಪಿ ಘಟಕ ಈ ವಿಡಿಯೋವನ್ನು ಟ್ವೀಟ್​ ಮಾಡಿ, ಆಕ್ರೋಶ ಹೊರ ಹಾಕಿದೆ.

ಡಿಕೆ ಶಿವಕುಮಾರ್ ವಿಡಿಯೋದಲ್ಲಿ ಹೇಳಿದ್ದೇನು?

“ನಿಮಗೆ ನಾನೊಂದು ಪ್ರಾಮಾಣಿಕ ಪ್ರಶ್ನೆ ಕೇಳುತ್ತೇನೆ. ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಒಂದು, ನಿಮ್ಮ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೆಯದ್ದು ಕಾವೇರಿ ನೀರು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ? ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2-3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರ? ನಾನು ಉಪಮುಖ್ಯಮಂತ್ರಿಯಾಗಿದ್ದೇನೆ, ಬಿಡಿಎ ಸಚಿವ, ಬೆಂಗಳೂರು ನಗರಾಭಿವೃದ್ಧಿ ಸಚಿವ ಮತ್ತು ಬೆಂಗಳೂರು ಜಲಮಂಡಳಿ ಸಚಿವನಿದ್ದೇನೆ. ಈ ಎಲ್ಲವೂ ನಿಮ್ಮ ಪಾಕೆಟ್​ನಲ್ಲಿವೆ. ಏನೆ ಸಮಸ್ಯೆಯಿದ್ದರೂ ನೀವು ಮುಖ್ಯಮಂತ್ರಿಗಳ ಮನೆಗೆ ಹೋಗಬೇಕಿಲ್ಲ. ನನ್ನ ಮನೆಗೆ ಬನ್ನಿ. ನಾನು ನಿಮಗೆ ಸಹಾಯ ಮಾಡುತ್ತೇನೆ. ನಾನು ನಿಮ್ಮ ಕೈಯಲ್ಲಿದ್ದೇನೆ. ಈಗ ಹೇಳಿ ನನಗೆ ನೀವು ಹೇಗೆ ಸಹಾಯ ಮಾಡುತ್ತೀರಾ? ನಮಗೆ ಭರವಸೆ ನೀಡಿ, ನನಗೆ ಮತ ಹಾಕಿ. ನಾನು ನಿಮಗೆ ಭರವಸೆ ನೀಡುತ್ತೇನೆ 2-3 ತಿಂಗಳಲ್ಲಿ ನಿಮ್ಮ ಈ ಎರಡು ಬೇಡಿಕೆಗಳನ್ನು ಈಡೇರಿಸುತ್ತೇನೆ. ಇದು ನನ್ನ ತಮ್ಮನ ಲೋಕಸಭಾ ಕ್ಷೇತ್ರ, ಅಂದರೆ ನನ್ನ ಕ್ಷೇತ್ರ ಇದ್ದ ಹಾಗೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪರೋಕ್ಷವಾಗಿ ಬ್ಯ್ಲಾಕ್​ಮೇಲ್​ ಮಾಡಿರುವ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

17 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

13 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago