ರಾಜ್ಯ

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಇದೇ ವೇಳೆ ವಿಪಕ್ಷ ಬಿಜೆಪಿ ಕೂಡ ರೈತರೊಂದಿಗೆ ಹೋರಾಟಕ್ಕೆ ಸಜ್ಜಾಗಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ.

ಇದನ್ನು ಓದಿ: ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಈ ಸಂಬಂಧ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಚಳಿಗಾಲದ ಅಧಿವೇಶನ ಆರಂಭವಾಗಿದೆ. ರೈತರಿಗೆ ಮೋಸ ಮಾಡುತ್ತಿರುವುದು ಕೇಂದ್ರ ಸರ್ಕಾರ. ರೈತರ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಬೆಳೆಗಳನ್ನು ಖರೀದಿ ಮಾಡುತ್ತಿಲ್ಲ. ಖರೀದಿ ಮಾಡಲು ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಿರುವ ಬಾಕಿ ಹಣ ಬಿಡುಗಡೆ ಮಾಡಬೇಕು. ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೊಳಿಸಲಿ ಎಂದು ಆಗ್ರಹಿಸಿದರು.

ರೈತರಿಗೆ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಹೋರಾಡಲಿ. ನಮ್ಮ ವಿರುದ್ಧ, ರಾಜ್ಯ ಸರ್ಕಾರದ ವಿರುದ್ಧ ಹೋರಾಡುವುದಲ್ಲ ಎಂದು ಗುಡುಗಿದರು.

ಆಂದೋಲನ ಡೆಸ್ಕ್

Recent Posts

400 ಕೋಟಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳ ಹೈಜಾಕ್‌ : ಚೋರ್ಲಾ ಘಾಟ್‌ನಲ್ಲಿ ನಡೆದ ದರೋಡೆ ಬಗ್ಗೆ ಎಸ್‌ಪಿ ಹೇಳಿದ್ದಿಷ್ಟು

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…

24 mins ago

ಮೂವರು ಕನ್ನಡಿಗರು ಸೇರಿದಂತೆ 45 ಮಂದಿಗೆ ಪದ್ಮಶ್ರೀ ಗೌರವ

ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…

43 mins ago

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

3 hours ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

3 hours ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

4 hours ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

4 hours ago