dk shivkumar (1)
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಇದೇ ವೇಳೆ ವಿಪಕ್ಷ ಬಿಜೆಪಿ ಕೂಡ ರೈತರೊಂದಿಗೆ ಹೋರಾಟಕ್ಕೆ ಸಜ್ಜಾಗಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ.
ಇದನ್ನು ಓದಿ: ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ
ಈ ಸಂಬಂಧ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಚಳಿಗಾಲದ ಅಧಿವೇಶನ ಆರಂಭವಾಗಿದೆ. ರೈತರಿಗೆ ಮೋಸ ಮಾಡುತ್ತಿರುವುದು ಕೇಂದ್ರ ಸರ್ಕಾರ. ರೈತರ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ. ಕೇಂದ್ರ ಸರ್ಕಾರ ರೈತರ ಬೆಳೆಗಳನ್ನು ಖರೀದಿ ಮಾಡುತ್ತಿಲ್ಲ. ಖರೀದಿ ಮಾಡಲು ಬಿಜೆಪಿ ನಾಯಕರು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಿರುವ ಬಾಕಿ ಹಣ ಬಿಡುಗಡೆ ಮಾಡಬೇಕು. ರೈತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೊಳಿಸಲಿ ಎಂದು ಆಗ್ರಹಿಸಿದರು.
ರೈತರಿಗೆ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿಯವರು ಹೋರಾಡಲಿ. ನಮ್ಮ ವಿರುದ್ಧ, ರಾಜ್ಯ ಸರ್ಕಾರದ ವಿರುದ್ಧ ಹೋರಾಡುವುದಲ್ಲ ಎಂದು ಗುಡುಗಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…