ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಮಹಿಳೆಯರನ್ನು ಕಾಲಕಸಕ್ಕಿಂತಲೂ ಕೀಳಾಗಿ ನೋಡುತ್ತಿರುವ ಈ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ಆರ್ಭಟಿಸಲಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಟ್ವಿಟ್‌ ಮಾಡಿರುವ ಬಿಜೆಪಿಯೂ, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಅಧಿಕಾರಕ್ಕೆ ಬಂದ ಭ್ರಷ್ಟ ಹಾಗೂ ಭಂಡ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡಿದ್ದಕ್ಕಿಂತಲೂ, ಮಹಿಳೆಯರ ಮಾನಹರಣ ಮಾಡಿದ್ದೆ ಜಾಸ್ತಿ ಎಂದು ಕಿಡಿಕಾರಿದೆ.

ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರಿಗೆ ತಪ್ಪದೆ 2000 ರೂ. ಹಣ ನೀಡುತ್ತೇವೆಂದು ಹೇಳಿ ಈಗ ಪ್ರತಿ ತಿಂಗಳು ನೀಡಲು ಅದು ಸಂಬಳವಾ ಎಂದು ಭಂಡತನದಿಂದ ಮರುಪ್ರಶ್ನೆ ಹಾಕುತ್ತಿದೆ. ಇದು ಕಾಂಗ್ರೆಸ್‌ ಮಹಿಳೆಯರ ಮೇಲೆ ತೋರುತ್ತಿರುವ ಅಸಲಿ ಕಾಳಜಿ ಹಾಗೂ ಗೌರವ ಎಂದು ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ತವರು ಜಿಲ್ಲೆ ಬೆಳಗಾವಿಯ ವಂಟಮೂರಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಸಂಪೂರ್ಣ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದರು. ಆದರೆ ಆ ಹೀನ ಕೃತ್ಯವೆಸಗಿದ ಆರೋಪಿಗಳನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ‌ ಕೇವಲ ನಾಮಕಾವಸ್ಥೆಗೆ ಬಂಧಿಸಿತೇ ಹೊರತು ನೊಂದ ಮಹಿಳೆ ಮತ್ತವರ ಕುಟುಂಬಕ್ಕೆ ನ್ಯಾಯ ದೊರಕಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮನುಕುಲವೇ ತಲೆತಗ್ಗಿಸುವಂತಹ ಬೆಳಗಾವಿಯ ಘಟನೆ ಮಾಸುವ ಮುನ್ನವೇ ಹಾನಗಲ್‌ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮತಾಂಧ ಜಿಹಾದಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಯಿತು. ಆ ಮಹಿಳೆಯ ಮೇಲೆ ಜಿಹಾದಿಗಳು ಹಲ್ಲೆ ಮಾಡುವ ವಿಡಿಯೋ ಸಾಕ್ಷಿ ದೊರೆತರೂ ಮಹಿಳೆಯ ದೂರನ್ನು ಸ್ವೀಕರಿಸಲು ಸಹ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಿಂದು ಮುಂದು ನೋಡಿತು ಎಂದು ಲೇವಡಿ ಮಾಡಿದೆ.

ಉಡುಪಿಯಲ್ಲಿ ಹಿಂದೂ ಹೆಣ್ಣು ಮಕ್ಕಳು ಶೌಚಾಲಯಕ್ಕೆ ತೆರಳಿದಾಗ, ಅಲ್ಲಿ ಜಿಹಾದಿಗಳು ಕ್ಯಾಮೆರಾ ಇಟ್ಟು ರಹಸ್ಯ ವಿಡಿಯೋ ಸೆರೆಹಿಡಿದಿದ್ದು ಆಕಸ್ಮಿಕ ಗೃಹ ಸಚಿವ ಜಿ.ಪರಮೇಶ್ವರ್‌ ಅವರ ದೃಷ್ಟಿಯಲ್ಲಿ ಮಕ್ಕಳಾಟ. ಅಲ್ಲದೇ ಬೆಂಗಳೂರಿನ ನಡುರಸ್ತೆಗಳಲ್ಲಿ ದುರುಳರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದರೆ ಅದು ಮಾಮೂಲಿ ಎಂದು ತೇಪೆ ಹಚ್ಚುತ್ತಾರೆ ಗೃಹ ಸಚಿವರು. ಒಟ್ಟಿನಲ್ಲಿ ಮಹಿಳೆಯರಿಗೆ ಕರ್ನಾಟಕ ಸುರಕ್ಷಿತವಲ್ಲ ಎಂಬುದನ್ನು ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ಸಾಬೀತುಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಪ್ರಣಾಳಿಕೆಯಲ್ಲಿ ಅಂಗನವಾಡಿ, ಆಶಾ, ಅಕ್ಷರ ದಾಸೋಹ ಕಾರ್ಯಕರ್ತೆಯರಿಗೆ ಸಂಬಳ ಹೆಚ್ಚಿಸುತ್ತೇವೆಂದು ಹೇಳಿದ್ದಷ್ಟೇ. ಆದರೆ ಇದುವರೆಗೂ ಪ್ರಣಾಳಿಕೆಯಲ್ಲಿ ಘೋಷಣೆಯಾಗಿದ್ದ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ತಿಳಿಸಿದೆ.

ಕಾಡಿನಲ್ಲಿದ್ದ ನಕ್ಸಲರು ಶರಣಾಗುತ್ತಾರೆ ಎಂದ ತತಕ್ಷಣ ಅವರನ್ನು ದೂರದ ಮೂಡಿಗೆರೆಯಿಂದ ಜೀರೋ ಟ್ರಾಫಿಕ್‌ನಲ್ಲಿ ಗೃಹ ಕಚೇರಿ ಕೃಷ್ಣಾಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ, ವಿಧಾನಸೌಧದ ಕೂಗಳತೆ ದೂರದಲ್ಲಿ ಹಗಲಿರುಳು ಪ್ರತಿಭಟಿಸುತ್ತಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಕೂಗು ಮಾತ್ರ ಕೇಳಿಸಲೇ ಇಲ್ಲ ಎಂದು ಕಿಡಿಕಾರಿದೆ.

ಅರ್ಚನ ಎಸ್‌ ಎಸ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

12 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

13 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

14 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

15 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

15 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

16 hours ago