ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಮಹಿಳೆಯರನ್ನು ಕಾಲಕಸಕ್ಕಿಂತಲೂ ಕೀಳಾಗಿ ನೋಡುತ್ತಿರುವ ಈ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ಆರ್ಭಟಿಸಲಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಟ್ವಿಟ್‌ ಮಾಡಿರುವ ಬಿಜೆಪಿಯೂ, ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಅಧಿಕಾರಕ್ಕೆ ಬಂದ ಭ್ರಷ್ಟ ಹಾಗೂ ಭಂಡ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡಿದ್ದಕ್ಕಿಂತಲೂ, ಮಹಿಳೆಯರ ಮಾನಹರಣ ಮಾಡಿದ್ದೆ ಜಾಸ್ತಿ ಎಂದು ಕಿಡಿಕಾರಿದೆ.

ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಮಹಿಳೆಯರಿಗೆ ತಪ್ಪದೆ 2000 ರೂ. ಹಣ ನೀಡುತ್ತೇವೆಂದು ಹೇಳಿ ಈಗ ಪ್ರತಿ ತಿಂಗಳು ನೀಡಲು ಅದು ಸಂಬಳವಾ ಎಂದು ಭಂಡತನದಿಂದ ಮರುಪ್ರಶ್ನೆ ಹಾಕುತ್ತಿದೆ. ಇದು ಕಾಂಗ್ರೆಸ್‌ ಮಹಿಳೆಯರ ಮೇಲೆ ತೋರುತ್ತಿರುವ ಅಸಲಿ ಕಾಳಜಿ ಹಾಗೂ ಗೌರವ ಎಂದು ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ತವರು ಜಿಲ್ಲೆ ಬೆಳಗಾವಿಯ ವಂಟಮೂರಿಯಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ಸಂಪೂರ್ಣ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದರು. ಆದರೆ ಆ ಹೀನ ಕೃತ್ಯವೆಸಗಿದ ಆರೋಪಿಗಳನ್ನು ಭ್ರಷ್ಟ ಕಾಂಗ್ರೆಸ್ ಸರ್ಕಾರ‌ ಕೇವಲ ನಾಮಕಾವಸ್ಥೆಗೆ ಬಂಧಿಸಿತೇ ಹೊರತು ನೊಂದ ಮಹಿಳೆ ಮತ್ತವರ ಕುಟುಂಬಕ್ಕೆ ನ್ಯಾಯ ದೊರಕಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಮನುಕುಲವೇ ತಲೆತಗ್ಗಿಸುವಂತಹ ಬೆಳಗಾವಿಯ ಘಟನೆ ಮಾಸುವ ಮುನ್ನವೇ ಹಾನಗಲ್‌ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮತಾಂಧ ಜಿಹಾದಿಗಳಿಂದ ಸಾಮೂಹಿಕ ಅತ್ಯಾಚಾರ ನಡೆಯಿತು. ಆ ಮಹಿಳೆಯ ಮೇಲೆ ಜಿಹಾದಿಗಳು ಹಲ್ಲೆ ಮಾಡುವ ವಿಡಿಯೋ ಸಾಕ್ಷಿ ದೊರೆತರೂ ಮಹಿಳೆಯ ದೂರನ್ನು ಸ್ವೀಕರಿಸಲು ಸಹ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಿಂದು ಮುಂದು ನೋಡಿತು ಎಂದು ಲೇವಡಿ ಮಾಡಿದೆ.

ಉಡುಪಿಯಲ್ಲಿ ಹಿಂದೂ ಹೆಣ್ಣು ಮಕ್ಕಳು ಶೌಚಾಲಯಕ್ಕೆ ತೆರಳಿದಾಗ, ಅಲ್ಲಿ ಜಿಹಾದಿಗಳು ಕ್ಯಾಮೆರಾ ಇಟ್ಟು ರಹಸ್ಯ ವಿಡಿಯೋ ಸೆರೆಹಿಡಿದಿದ್ದು ಆಕಸ್ಮಿಕ ಗೃಹ ಸಚಿವ ಜಿ.ಪರಮೇಶ್ವರ್‌ ಅವರ ದೃಷ್ಟಿಯಲ್ಲಿ ಮಕ್ಕಳಾಟ. ಅಲ್ಲದೇ ಬೆಂಗಳೂರಿನ ನಡುರಸ್ತೆಗಳಲ್ಲಿ ದುರುಳರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದರೆ ಅದು ಮಾಮೂಲಿ ಎಂದು ತೇಪೆ ಹಚ್ಚುತ್ತಾರೆ ಗೃಹ ಸಚಿವರು. ಒಟ್ಟಿನಲ್ಲಿ ಮಹಿಳೆಯರಿಗೆ ಕರ್ನಾಟಕ ಸುರಕ್ಷಿತವಲ್ಲ ಎಂಬುದನ್ನು ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರ ಸಾಬೀತುಪಡಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಪ್ರಣಾಳಿಕೆಯಲ್ಲಿ ಅಂಗನವಾಡಿ, ಆಶಾ, ಅಕ್ಷರ ದಾಸೋಹ ಕಾರ್ಯಕರ್ತೆಯರಿಗೆ ಸಂಬಳ ಹೆಚ್ಚಿಸುತ್ತೇವೆಂದು ಹೇಳಿದ್ದಷ್ಟೇ. ಆದರೆ ಇದುವರೆಗೂ ಪ್ರಣಾಳಿಕೆಯಲ್ಲಿ ಘೋಷಣೆಯಾಗಿದ್ದ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ತಿಳಿಸಿದೆ.

ಕಾಡಿನಲ್ಲಿದ್ದ ನಕ್ಸಲರು ಶರಣಾಗುತ್ತಾರೆ ಎಂದ ತತಕ್ಷಣ ಅವರನ್ನು ದೂರದ ಮೂಡಿಗೆರೆಯಿಂದ ಜೀರೋ ಟ್ರಾಫಿಕ್‌ನಲ್ಲಿ ಗೃಹ ಕಚೇರಿ ಕೃಷ್ಣಾಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ, ವಿಧಾನಸೌಧದ ಕೂಗಳತೆ ದೂರದಲ್ಲಿ ಹಗಲಿರುಳು ಪ್ರತಿಭಟಿಸುತ್ತಿದ್ದ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಕೂಗು ಮಾತ್ರ ಕೇಳಿಸಲೇ ಇಲ್ಲ ಎಂದು ಕಿಡಿಕಾರಿದೆ.

ಅರ್ಚನ ಎಸ್‌ ಎಸ್

Recent Posts

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

1 min ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

2 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

3 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

3 hours ago