ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ ಗುತ್ತಿಗೆದಾರ ಸಚಿನ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಲೀನ್ ಚಿಟ್ ನೀಡಿರುವುದು ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಸಚಿನ್ ಅವರ ಡೆತ್ ನೋಟ್ನಲ್ಲಿ ಸ್ಪಷ್ಟವಾಗಿ ಪ್ರಿಯಾಂಕ್ ಖರ್ಗೆಯವರ ಆಪ್ತರ ಹೆಸರು ಉಲ್ಲೇಖಗೊಂಡಿದೆ. ಸಚಿವರ ಆಪ್ತರು ಸಚಿವರ ಪ್ರಭಾವ, ರಕ್ಷಣೆ ಇಲ್ಲದೆ ಕೋಟಿ ಕೋಟಿ ಡಿಮ್ಯಾಂಡ್ ಮಾಡಲು ಸಾಧ್ಯವೇ ಇಲ್ಲ. ಹೀಗಿರುವಾಗ ಸ್ವತಃ ಉಪ ಮುಖ್ಯಮಂತ್ರಿಗಳೇ ಆರೋಪಿತರ ಪರವಾಗಿ ನಿಂತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮುಖ್ಯಮಂತ್ರಿ ಪಟ್ಟ ಏರಲೇಬೇಕೆಂಬ ಹಠದಲ್ಲಿರುವ ಡಿಕೆಶಿ, ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಪರವಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಡಿಕೆಶಿ ಉದಾಹರಣೆಯಾಗಿದ್ದಾರೆ ಎಂದು ವ್ಯಂಗ್ಯವಾಡಿದೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಹತ್ಯೆ. ಸಚಿನ್ ಎಂಬಾತ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬರೆದಿಟ್ಟರೂ, ಪ್ರಿಯಾಂಕ್ ಖರ್ಗೆ ಅವರ ಆಪ್ತ, ಕೊಲೆಗಾರ ರಾಜು ಕಪನೂರನ್ನು ಬಂಧಿಸದಿರುವುದು ಈ ಕೊಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಾಗಿಯಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ.
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…