ರಾಜ್ಯ

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ: ಬಿಜೆಪಿ ಟ್ವೀಟ್‌

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ ಗುತ್ತಿಗೆದಾರ ಸಚಿನ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕ್ಲೀನ್ ಚಿಟ್ ನೀಡಿರುವುದು ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಎಂಬಂತಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಸಚಿನ್ ಅವರ ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಪ್ರಿಯಾಂಕ್ ಖರ್ಗೆಯವರ ಆಪ್ತರ ಹೆಸರು ಉಲ್ಲೇಖಗೊಂಡಿದೆ. ಸಚಿವರ ಆಪ್ತರು ಸಚಿವರ ಪ್ರಭಾವ, ರಕ್ಷಣೆ ಇಲ್ಲದೆ ಕೋಟಿ ಕೋಟಿ ಡಿಮ್ಯಾಂಡ್ ಮಾಡಲು ಸಾಧ್ಯವೇ ಇಲ್ಲ. ಹೀಗಿರುವಾಗ ಸ್ವತಃ ಉಪ ಮುಖ್ಯಮಂತ್ರಿಗಳೇ ಆರೋಪಿತರ ಪರವಾಗಿ ನಿಂತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದೆ.

ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮುಖ್ಯಮಂತ್ರಿ ಪಟ್ಟ ಏರಲೇಬೇಕೆಂಬ ಹಠದಲ್ಲಿರುವ ಡಿಕೆಶಿ, ಅದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಪರವಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ನಾಯಕರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಡಿಕೆಶಿ ಉದಾಹರಣೆಯಾಗಿದ್ದಾರೆ ಎಂದು ವ್ಯಂಗ್ಯವಾಡಿದೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಹತ್ಯೆ. ಸಚಿನ್‌ ಎಂಬಾತ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬರೆದಿಟ್ಟರೂ, ಪ್ರಿಯಾಂಕ್‌ ಖರ್ಗೆ ಅವರ ಆಪ್ತ, ಕೊಲೆಗಾರ ರಾಜು ಕಪನೂರನ್ನು ಬಂಧಿಸದಿರುವುದು ಈ ಕೊಲೆಯಲ್ಲಿ ಕಾಂಗ್ರೆಸ್‌ ಸರ್ಕಾರ ಭಾಗಿಯಾಗಿದೆ ಎಂಬುದಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದೆ.

ಅರ್ಚನ ಎಸ್‌ ಎಸ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago