ರಾಜ್ಯ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾದರೆ, ಜನರ ಗತಿಯೇನು?-ಬಿಜೆಪಿ ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್‌ ಮಾಡಿದ್ದು, ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾದರೆ, ಜನರ ಗತಿಯೇನು? ಎಂದು ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿಯೂ, ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ ಎಂದು ಕಿಡಿಕಾರಿದೆ.

ಕೆಲವೇ ದಿನಗಳ ಹಿಂದೆ ಶಕ್ತಿಸೌಧದೊಳಗೆ ರೌಡಿಗಳನ್ನು ಒಳಬಿಟ್ಟು ಪರಿಷತ್‌ ಸದಸ್ಯರ ಮೇಲೆ ಹಲ್ಲೆ ಮಾಡಿಸಿದ್ದ ಕಾಂಗ್ರೆಸ್‌ ಸರ್ಕಾರ ಈಗ ಜನಪ್ರತಿನಿಧಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿಸಿದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು? ಎಂದು ಪ್ರಶ್ನಿಸಿದೆ.

ಸರ್ಕಾರಿ ಪ್ರಾಯೋಜಿತ ಹಲ್ಲೆ, ದಾಳಿಗಳ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

2 hours ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

2 hours ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

2 hours ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

3 hours ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

3 hours ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

3 hours ago