ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ.
2022ರ ಏಪ್ರಿಲ್ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. ಅಲ್ಲದೇ, ಆ ಆರೋಪಿಗಳ ಪೈಕಿಯಲ್ಲಿ ಕೆಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಎದುರಿಸುತ್ತಿರುವ ಅಧಿಕ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಗಲಭೆಯಲ್ಲಿ ಭಾಗಿಯಾದವರ ವಿರುದ್ಧದ ಕೇಸ್ ಸೇರಿದಂತೆ ಒಟ್ಟು 60 ಪ್ರಕರಣಗಳನ್ನು ಹಿಂಪಡೆಯಲು ಚಿಂತನೆ ನಡೆಸಿದೆ. ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಬಿಜೆಪಿ ನಾಯಕರು ಓಲೈಕೆ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಈಗಾಗಲೇ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ. ಈ ಮಧ್ಯೆ ಸರ್ಕಾರ ಅದನ್ನು ಕೈಬಿಡುವುದು ಸರಿಯೆಂಬಂತೆ ಕಾಣುತ್ತಿಲ್ಲ. ಅಲ್ಲದೇ, ರಾಜ್ಯ ಸಚಿವ ಸಂಪುಟದ ನಿರ್ಧಾರ ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆಯ ಧೋರಣೆಯನ್ನು ತೋರಿಸುತ್ತದೆ. ಈ ಘಟನೆಗಳು ಭಯೋತ್ಪಾದನಾ ಕೃತ್ಯಗಳಿಗಿಂತ ಕಡಿಮೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಈ ನಿರ್ಧಾರದಿಂದ ಪೊಲೀಸರು ಹಾಗೂ ನ್ಯಾಯಾಂಗ ಪ್ರಕರಣಗಳ ಅಭಿಪ್ರಾಯಗಳಿಗೆ ವಿರುದ್ಧವಾದಂತಾಗಿದೆ ಎಂದು ಆರೋಪಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…