ರಾಜ್ಯ

ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಕಿಡಿ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕೈಬಿಡುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯದೇ ಹೋದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಒತ್ತಾಯಿಸಿದ್ದಾರೆ.

2022ರ ಏಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. ಅಲ್ಲದೇ, ಆ ಆರೋಪಿಗಳ ಪೈಕಿಯಲ್ಲಿ ಕೆಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಎದುರಿಸುತ್ತಿರುವ ಅಧಿಕ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಗಲಭೆಯಲ್ಲಿ ಭಾಗಿಯಾದವರ ವಿರುದ್ಧದ ಕೇಸ್‌ ಸೇರಿದಂತೆ ಒಟ್ಟು 60 ಪ್ರಕರಣಗಳನ್ನು ಹಿಂಪಡೆಯಲು ಚಿಂತನೆ ನಡೆಸಿದೆ. ಕಾಂಗ್ರೆಸ್‌ ಪಕ್ಷದ ನಿರ್ಧಾರವನ್ನು ಬಿಜೆಪಿ ನಾಯಕರು ಓಲೈಕೆ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಈಗಾಗಲೇ ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಈ ಮಧ್ಯೆ ಸರ್ಕಾರ ಅದನ್ನು ಕೈಬಿಡುವುದು ಸರಿಯೆಂಬಂತೆ ಕಾಣುತ್ತಿಲ್ಲ. ಅಲ್ಲದೇ, ರಾಜ್ಯ ಸಚಿವ ಸಂಪುಟದ ನಿರ್ಧಾರ ಕಾಂಗ್ರೆಸ್‌ ಸರ್ಕಾರದ ದಬ್ಬಾಳಿಕೆಯ ಧೋರಣೆಯನ್ನು ತೋರಿಸುತ್ತದೆ. ಈ ಘಟನೆಗಳು ಭಯೋತ್ಪಾದನಾ ಕೃತ್ಯಗಳಿಗಿಂತ ಕಡಿಮೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಈ ನಿರ್ಧಾರದಿಂದ ಪೊಲೀಸರು ಹಾಗೂ ನ್ಯಾಯಾಂಗ ಪ್ರಕರಣಗಳ ಅಭಿಪ್ರಾಯಗಳಿಗೆ ವಿರುದ್ಧವಾದಂತಾಗಿದೆ ಎಂದು ಆರೋಪಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

5 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

5 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

5 hours ago