ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜಧಾನಿ ಬೆಂಗಳೂರಿನಲ್ಲಿ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು, ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ.
ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಮಾತ್ರ. ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರಿಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳೀ ಬರುತ್ತಿದೆ.
ಒಂದು ಕಡೆ ಅಭಿವೃದ್ಧಿಯೂ ಇಲ್ಲ. ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ. ಕನಿಷ್ಠ ಕಾನೂನು ಸುರಕ್ಷತೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರ ದುರುಳರ ವಿರುದ್ಧ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ಆಗ್ರಹಿಸಿದರು.
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…