ಬೆಂಗಳೂರು: ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂಬ ಸಂಸದ ಡಾ.ಕೆ.ಸುಧಾಕರ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನ್ನ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ. ಅವರ ಸ್ವತ್ತೂ ಅಲ್ಲ. ಹಗುರ ಮಾತು ಯಾರಿಗೂ ಶೋಭೆ ತರಲ್ಲ ಎಂದು ಗುಡುಗಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಮುಂದಿನ ಬಾರಿ ಸಿಎಂ ಆಗಲು ನಾನು ಸಂಘಟನೆ ಮಾಡುತ್ತಿಲ್ಲ. ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರಲ್ಲ. ಹಗುರವಾಗಿ ಮಾತನಾಡಬಾರದು ಎಂದು ಮನವಿ ಮಾಡುತ್ತೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ನಿನ್ನೆ ಸುಧಾಕರ್ ಅವರ ಆಕ್ರೋಶಭರಿತ ಮಾತುಗಳನ್ನು ನೋಡಿದ್ದೇನೆ. ನಮ್ಮನ್ನು ಸಮಾಧಿ ಮಾಡಲು ಹೊರಟಿದ್ದಾರೆ ಎಂದಿದ್ದಾರೆ. ಈ ರೀತಿ ಆಕ್ರೋಶದ ಮಾತು ಸರಿಯಲ್ಲ. ನಾನು ಸುಧಾಕರ್ ಭೇಟಿಯಾಗಿ ಮಾತನಾಡುತ್ತೇನೆ. ನನ್ನ ಮೇಲೆ ಸುಧಾಕರ್ ಆರೋಪ ಮಾಡೋದು ಸರಿಯಲ್ಲ. ಇದರಿಂದ ಅವರಿಗೂ ಗೌರವ ಸಿಗಲ್ಲ ಪಕ್ಷಕ್ಕೂ ಗೌರವ ಇಲ್ಲ ಎಂದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…