ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಒಂದು ಕಡೆ ಜನರ ಮಾನ, ಪ್ರಾಣ, ಆಸ್ತಿಗಳಿಗೆ ರಕ್ಷಣೆ ಸಿಗದೆ ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರಗಳು ತಾಂಡವವಾಡುತ್ತಿದ್ದರೆ, ಮತ್ತೊಂದು ಕಡೆ ಚಕ್ರಬಡ್ಡಿ ವಸೂಲಿ, ಠೇವಣಿ ವಂಚನೆ ನಿರಂತರವಾಗಿ ನಡೆಯುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸರ್ಕಾರ ಬಂದಾಗಿನಿಂದ ಶೋಷಿತರ ದನಿಯಾಗಿ ಪರಿಶಿಷ್ಟ ಸಮುದಾಯಗಳ ರಕ್ಷಣೆಗೆ ಹಾಗೂ ಪರಿಶಿಷ್ಟ ಕಲ್ಯಾಣದ ಕುರಿತು ವರದಿ ನೀಡಬೇಕಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ನಿಂತ ನೀರಂತಾಗಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದಿದ್ದಾರೆ.
ಪರಿಶಿಷ್ಟರ ಬಗ್ಗೆ ಮೊಸಳೆಗಣ್ಣೀರು ಸುರಿಸುವ ಸರ್ಕಾರದ ಅಸಲಿ ಮುಖವಾಡ ಈಗ ಬಯಲಾಗಿದೆ. ಪರಿಶಿಷ್ಟರ ಆಯೋಗಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲದಿರುವ ವಿಷಯ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿಯವರೆಗೂ ತಲುಪಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ನ್ಯಾಯಾಲಯದಿಂದಲೇ ಈ ಸರ್ಕಾರಕ್ಕೆ ಚಾಟಿ ಏಟು ಬೀಳದ ಹೊರತು ಪರಿಶಿಷ್ಟರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ ಎಂಬುದು ಇದೀಗ ಸಾಬೀತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಭಾಗ್ಯಗಳ ಬಗ್ಗೆ ಬೆನ್ನು ತಟ್ಟಿಕೊಳ್ಳುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮಾಂಗಲ್ಯ ಭಾಗ್ಯಕ್ಕೆ ಕುತ್ತು ಬಂದಿದ್ದರೂ ಕಣ್ಣು ಮುಚ್ಚಿ ಕುಳಿತಿದೆ. ಈ ನೆಲದ ಹೆಣ್ಣು ತನಗೆ ಯಾವ ಭಾಗ್ಯ ಕೊಡದಿದ್ದರೂ ಚಿಂತೆ ಇಲ್ಲ ಉಸಿರಿರುವ ತನಕ ಮಾಂಗಲ್ಯ ಭಾಗ್ಯ ಉಳಿಸು ಎಂದು ದೇವಾನುದೇವತೆಗಳಲ್ಲಿ ಪ್ರಾರ್ಥಿಸುತ್ತಾಳೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…