ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಒಂದು ಕಡೆ ಜನರ ಮಾನ, ಪ್ರಾಣ, ಆಸ್ತಿಗಳಿಗೆ ರಕ್ಷಣೆ ಸಿಗದೆ ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರಗಳು ತಾಂಡವವಾಡುತ್ತಿದ್ದರೆ, ಮತ್ತೊಂದು ಕಡೆ ಚಕ್ರಬಡ್ಡಿ ವಸೂಲಿ, ಠೇವಣಿ ವಂಚನೆ ನಿರಂತರವಾಗಿ ನಡೆಯುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸರ್ಕಾರ ಬಂದಾಗಿನಿಂದ ಶೋಷಿತರ ದನಿಯಾಗಿ ಪರಿಶಿಷ್ಟ ಸಮುದಾಯಗಳ ರಕ್ಷಣೆಗೆ ಹಾಗೂ ಪರಿಶಿಷ್ಟ ಕಲ್ಯಾಣದ ಕುರಿತು ವರದಿ ನೀಡಬೇಕಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ನಿಂತ ನೀರಂತಾಗಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದಿದ್ದಾರೆ.

ಪರಿಶಿಷ್ಟರ ಬಗ್ಗೆ ಮೊಸಳೆಗಣ್ಣೀರು ಸುರಿಸುವ ಸರ್ಕಾರದ ಅಸಲಿ ಮುಖವಾಡ ಈಗ ಬಯಲಾಗಿದೆ. ಪರಿಶಿಷ್ಟರ ಆಯೋಗಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲದಿರುವ ವಿಷಯ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿಯವರೆಗೂ ತಲುಪಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ನ್ಯಾಯಾಲಯದಿಂದಲೇ ಈ ಸರ್ಕಾರಕ್ಕೆ ಚಾಟಿ ಏಟು ಬೀಳದ ಹೊರತು ಪರಿಶಿಷ್ಟರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ ಎಂಬುದು ಇದೀಗ ಸಾಬೀತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಭಾಗ್ಯಗಳ ಬಗ್ಗೆ ಬೆನ್ನು ತಟ್ಟಿಕೊಳ್ಳುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮಾಂಗಲ್ಯ ಭಾಗ್ಯಕ್ಕೆ ಕುತ್ತು ಬಂದಿದ್ದರೂ ಕಣ್ಣು ಮುಚ್ಚಿ ಕುಳಿತಿದೆ. ಈ ನೆಲದ ಹೆಣ್ಣು ತನಗೆ ಯಾವ ಭಾಗ್ಯ ಕೊಡದಿದ್ದರೂ ಚಿಂತೆ ಇಲ್ಲ ಉಸಿರಿರುವ ತನಕ ಮಾಂಗಲ್ಯ ಭಾಗ್ಯ ಉಳಿಸು ಎಂದು ದೇವಾನುದೇವತೆಗಳಲ್ಲಿ ಪ್ರಾರ್ಥಿಸುತ್ತಾಳೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

11 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

11 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

11 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

11 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

11 hours ago