ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಒಂದು ಕಡೆ ಜನರ ಮಾನ, ಪ್ರಾಣ, ಆಸ್ತಿಗಳಿಗೆ ರಕ್ಷಣೆ ಸಿಗದೆ ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರಗಳು ತಾಂಡವವಾಡುತ್ತಿದ್ದರೆ, ಮತ್ತೊಂದು ಕಡೆ ಚಕ್ರಬಡ್ಡಿ ವಸೂಲಿ, ಠೇವಣಿ ವಂಚನೆ ನಿರಂತರವಾಗಿ ನಡೆಯುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸರ್ಕಾರ ಬಂದಾಗಿನಿಂದ ಶೋಷಿತರ ದನಿಯಾಗಿ ಪರಿಶಿಷ್ಟ ಸಮುದಾಯಗಳ ರಕ್ಷಣೆಗೆ ಹಾಗೂ ಪರಿಶಿಷ್ಟ ಕಲ್ಯಾಣದ ಕುರಿತು ವರದಿ ನೀಡಬೇಕಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ನಿಂತ ನೀರಂತಾಗಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ ಎಂದಿದ್ದಾರೆ.
ಪರಿಶಿಷ್ಟರ ಬಗ್ಗೆ ಮೊಸಳೆಗಣ್ಣೀರು ಸುರಿಸುವ ಸರ್ಕಾರದ ಅಸಲಿ ಮುಖವಾಡ ಈಗ ಬಯಲಾಗಿದೆ. ಪರಿಶಿಷ್ಟರ ಆಯೋಗಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲದಿರುವ ವಿಷಯ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿಯವರೆಗೂ ತಲುಪಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ನ್ಯಾಯಾಲಯದಿಂದಲೇ ಈ ಸರ್ಕಾರಕ್ಕೆ ಚಾಟಿ ಏಟು ಬೀಳದ ಹೊರತು ಪರಿಶಿಷ್ಟರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ ಎಂಬುದು ಇದೀಗ ಸಾಬೀತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಭಾಗ್ಯಗಳ ಬಗ್ಗೆ ಬೆನ್ನು ತಟ್ಟಿಕೊಳ್ಳುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮಾಂಗಲ್ಯ ಭಾಗ್ಯಕ್ಕೆ ಕುತ್ತು ಬಂದಿದ್ದರೂ ಕಣ್ಣು ಮುಚ್ಚಿ ಕುಳಿತಿದೆ. ಈ ನೆಲದ ಹೆಣ್ಣು ತನಗೆ ಯಾವ ಭಾಗ್ಯ ಕೊಡದಿದ್ದರೂ ಚಿಂತೆ ಇಲ್ಲ ಉಸಿರಿರುವ ತನಕ ಮಾಂಗಲ್ಯ ಭಾಗ್ಯ ಉಳಿಸು ಎಂದು ದೇವಾನುದೇವತೆಗಳಲ್ಲಿ ಪ್ರಾರ್ಥಿಸುತ್ತಾಳೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…