ಬೆಂಗಳೂರು: ಜನರಿಗೆ ರಕ್ಷಣೆ ಕಲ್ಪಿಸದೇ ಸರ್ಕಾರ ಯಾವ ಭಾಗ್ಯ ಕೊಟ್ಟರೂ ನಿರರ್ಥಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜನರಿಗೆ ಮಾನ-ಪ್ರಾಣದ ರಕ್ಷಣೆಯ ಭಾಗ್ಯ ಕಲ್ಪಿಸಲಾಗದಿದ್ದರೆ ಸರ್ಕಾರ ಯಾವ ಭಾಗ್ಯ ಕೊಟ್ಟರೂ ಅದು ನಿರರ್ಥಕ ಎಂಬ ಅರಿವು ಸರ್ಕಾರಕ್ಕಿರಬೇಕು.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಮಿತಿಮೀರಿದೆ.
ಫೈನಾನ್ಸ್ ಹಾವಳಿ ಹಾಗೂ ವಸೂಲಾತಿ ದೌರ್ಜನ್ಯದಿಂದ ಸಾಲಗಾರ ಬಡವರು ತತ್ತರಿಸಿದ್ದು, ಅದರಲ್ಲೂ ಗ್ರಾಮೀಣ ಪ್ರದೇಶದ ಬಡ ಜನರು, ಕೃಷಿಕರು, ಸಣ್ಣ ಹಿಡುವಳಿದಾರ ರೈತರು, ಶ್ರಮಿಕ ವರ್ಗದವರು, ಬೀದಿ ಬದಿ ವ್ಯಾಪಾರಿಗಳನ್ನು ಗುರಿಯನ್ನಾಗಿಸಿಕೊಂಡು ಸಾಲ ವಿತರಣೆ ಮಾಡುತ್ತಿದ್ದು, ಇವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ಗಳ ಜಾಲ ಸಾಲಗಾರರ ಪ್ರಾಣ ಹಿಂಡಿ ವಸೂಲಾತಿಗೆ ನಿಂತಿರುವುದು ಬಯಲಾಗಿದೆ. ಮರ್ಯಾದೆಗೆ ಅಂಜಿ ಗ್ರಾಮೀಣ ಪ್ರದೇಶದ ಜನರು ಮನೆ ತೊರೆದು ಹೋಗುತ್ತಿದ್ದಾರೆ. ಇವರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.
ಇನ್ನು ಎಷ್ಟು ಬಿಟ್ಟಿ ಭಾಗ್ಯಗಳನ್ನು ನೀಡಿದರೇನು ಬಡವರನ್ನು ಮೈಕ್ರೋ ಫೈನಾನ್ಸ್ನಂತಹ ಜಾಲದ ವ್ಯೂಹಕ್ಕೆ ಬಡವರು ಸಿಲುಕಿಕೊಂಡು ನರಳುತ್ತಿರುವ ಪರಿಸ್ಥಿತಿ ಉದ್ಭವಿಸಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…