ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ವಸೂಲಿ ಮಾಡಬಹುದು ಎಂಬ ಮಾತನ್ನು ರಾಜ್ಯ ಸರ್ಕಾರ ಹೇಳುತ್ತಿರುವುದು ದುರ್ದೈವದ ಸಂಗತಿ.
ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಷ್ಟೆಲ್ಲಾ ಬೆಳವಣಿಗೆಗಳಾದರೂ ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರೂ ರಾಜ್ಯ ಸರ್ಕಾರ ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ, ರೈತರ ರಕ್ಷಣೆಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…