ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದನ್ನು ಬಿಟ್ಟು ನಮ್ಮ ಬಗ್ಗೆ ಚರ್ಚೆ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಅಧಿವೇಶನ ಆರಂಭ ಆಗುವುದಕ್ಕೂ ಮುಂಚೆ ಉತ್ತರ ಕರ್ನಾಟಕ ಭಾಗದ ಹಾಗೂ ರೈತರ ಸಮಸ್ಯೆ ಬಗ್ಗೆ ಸಮಗ್ರ ಚರ್ಚೆ ಮಾಡಲು ಒತ್ತಾಯಿಸಿದ್ದೆವು. ಇಂದು ಹಾಗೂ ನಾಳೆ ಈ ಬಗ್ಗೆ ಚರ್ಚೆ ಮಾಡುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿದ್ದರು. ಆದರೆ ಈ ನಡುವೆ ಆಡಳಿತ ಪಜಕ್ಷದ ಮುಖಂಡರು ಯಾವುದೇ ಚರ್ಚೆ ಮಾಡುವುದಕ್ಕೆ ತಯಾರಿಲ್ಲ ಎಂದು ಕಿಡಿಕಾರಿದರು.
ಸದನದಲ್ಲಿ ಮುನಿರತ್ನ ಕುರಿತು ಚರ್ಚೆ ಮಾಡಲು ಮುಂದಾಗಿದ್ದಾರೆ. ನಾವು ಈ ಚರ್ಚೆಗೆ ಅವಕಾಶ ಮಾಡಲು ಬಿಡಲ್ಲ. ನಾವು ಹಾಗೂ ಜೆಡಿಎಸ್ ಶಾಸಕರು ಉತ್ತರ ಕರ್ನಾಟಕ ಭಾಗದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.
ಇನ್ನು ರಾಜ್ಯದಲ್ಲಿ ಕಬ್ಬು ಬೆಳೆಗಾರರು, ತೊಗರಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಗುಲಬರ್ಗಾ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ತೊಗರಿ ಬೆಳೆ ನಾಶವಾಗಿದೆ. ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸಮರ್ಪಕ ಉತ್ತರ ನೀಡಲಿ ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಮೇಲೆ 150 ಕೋಟಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಸದನದಲ್ಲಿ ಆರೋಪ ಮಾಡಿದ್ದಾರೆ. ಈ ಬಗ್ಗೆ ನಾನು ಸದನದಲ್ಲೇ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದರು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…