ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ 400 ಕೋಟಿ ರೂ ಅನುದಾನ ನೀಡಬೇಕಿದೆ. ಆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕಾಗಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿ ಆ ವಿವಿಗಳನ್ನು ಮುಚ್ಚಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕಿತ್ತು ಎಂದು ತಿಳಿಸಿದ ಅವರು, ಅತಿಥಿ ಶಿಕ್ಷಕರ ಹೋರಾಟಕ್ಕೆ ನಮ್ಮ ಬೆಂಬಲ ಇದ್ದೇ ಇದೆ ಎಂದರು.
ಈ ಹಿಂದೆ 5 ಸಾವಿರ ಇದ್ದ ಗೌರವಧನವನ್ನು 2500ರೂ ಹೆಚ್ಚಿಸಿ, 7500 ಕೊಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು. ಬಳಿಕ ಅದನ್ನು 10 ಸಾವಿರಕ್ಕೆ ಬಿಜೆಪಿ ಸರ್ಕಾರ ಏರಿಸಿದ್ದನ್ನು ತಾವು ತಮ್ಮ ಕರಪತ್ರದಲ್ಲಿ ಪ್ರಸ್ತಾಪಿಸಿದ್ದೀರಿ. ಅತಿಥಿ ಶಿಕ್ಷಕರು ನಾಡಿನ ಭವಿಷ್ಯ ರೂಪಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕನಿಷ್ಠ ಬೇಡಿಕೆಗಳಿಗಾದರೂ ಸ್ಪಂದಿಸುವುದು ಸರ್ಕಾರದ ಕರ್ತವ್ಯ ಎಂದು ನುಡಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…