ರಾಜ್ಯ

ನಂಜುಂಡೇಶ್ವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ನಂಜನಗೂಡು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿ ಪೂಜೆ  ಸಲ್ಲಿಸಿದರು.

ಇಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಬಿ.ವೈ.ವಿಜಯೇಂದ್ರ ವಿವಿಧ ಸಭೆ ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗ ಮಧ್ಯೆ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ದೇವಾಲಯದಲ್ಲಿ ಪೂಜೆ ಸಲ್ಲಿಸಿದ ವಿಜಯೇಂದ್ರ ಅವರು ಶ್ರೀಕಂಠೇಶ್ವರನಿಗೆ ತುಲಾಭಾರ ಸೇವೆ ಸಲ್ಲಿಸಿದರು. ಬಳಿಕ ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಗೆ ತೆರಳಿದರು.

 

ಈ ವೇಳೆ ಹಾಸನದ ಮಾಜಿ ಶಾಸಕ ಪ್ರೀತಮ್‌ಗೌಡ, ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್‌, ನಂಜನಗೂಡು ತಾಲೂಕು ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಮುಖಂಡರಾದ ಎಂ.ಕೃಷ್ಣಪ್ಪಗೌಡ, ತಾಲೂಕು ಯುವ ಮೋರ್ಚಾ ಅಧ್ಯಕ್ಷ  ಮನೋಜ್‌ ಕುಮಾರ್‌ ಸೇರಿದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರುಇದ್ದರು.

ಮುಖಾಮುಖಿಯಾದ ವಿಜಯೇಂದ್ರ-ದರ್ಶನ್‌: ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗು ಸ್ಥಳಿಯ ಶಾಸಕ ದರ್ಶನ್‌ ಧೃವನಾರಾಯಣ್‌ ಮುಖಾಮುಖಿಯಾಗಿದ್ದಾರೆ. ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಸ್ಥಳಿಯ ಶಾಸಕರು ದೇವಾಲಯದಲ್ಲಿ ದೇವರ ದರ್ಶನ ಪಡೆಯುವ ವೇಳೆಗೆ ವಿಜಯೇಂದ್ರ ಆಗಮಿಸಿದ್ದಾರೆ. ಅಚಾನಕ್ಕಾಗಿ ಆಗಮಿಸಿದ ಇಬ್ಬರು ನಾಯಕರು ಮುಖಾಮುಖಿಯಾಗಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೇ ಮಾತುಕತೆಯಾಗಲಿಲ್ಲ.

 

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

12 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

12 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

13 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

14 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

14 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

16 hours ago