ರಾಜ್ಯ

ನಂಜುಂಡೇಶ್ವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ನಂಜನಗೂಡು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿ ಪೂಜೆ  ಸಲ್ಲಿಸಿದರು.

ಇಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಬಿ.ವೈ.ವಿಜಯೇಂದ್ರ ವಿವಿಧ ಸಭೆ ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗ ಮಧ್ಯೆ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ದೇವಾಲಯದಲ್ಲಿ ಪೂಜೆ ಸಲ್ಲಿಸಿದ ವಿಜಯೇಂದ್ರ ಅವರು ಶ್ರೀಕಂಠೇಶ್ವರನಿಗೆ ತುಲಾಭಾರ ಸೇವೆ ಸಲ್ಲಿಸಿದರು. ಬಳಿಕ ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಗೆ ತೆರಳಿದರು.

 

ಈ ವೇಳೆ ಹಾಸನದ ಮಾಜಿ ಶಾಸಕ ಪ್ರೀತಮ್‌ಗೌಡ, ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್‌, ನಂಜನಗೂಡು ತಾಲೂಕು ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಮುಖಂಡರಾದ ಎಂ.ಕೃಷ್ಣಪ್ಪಗೌಡ, ತಾಲೂಕು ಯುವ ಮೋರ್ಚಾ ಅಧ್ಯಕ್ಷ  ಮನೋಜ್‌ ಕುಮಾರ್‌ ಸೇರಿದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರುಇದ್ದರು.

ಮುಖಾಮುಖಿಯಾದ ವಿಜಯೇಂದ್ರ-ದರ್ಶನ್‌: ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗು ಸ್ಥಳಿಯ ಶಾಸಕ ದರ್ಶನ್‌ ಧೃವನಾರಾಯಣ್‌ ಮುಖಾಮುಖಿಯಾಗಿದ್ದಾರೆ. ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಸ್ಥಳಿಯ ಶಾಸಕರು ದೇವಾಲಯದಲ್ಲಿ ದೇವರ ದರ್ಶನ ಪಡೆಯುವ ವೇಳೆಗೆ ವಿಜಯೇಂದ್ರ ಆಗಮಿಸಿದ್ದಾರೆ. ಅಚಾನಕ್ಕಾಗಿ ಆಗಮಿಸಿದ ಇಬ್ಬರು ನಾಯಕರು ಮುಖಾಮುಖಿಯಾಗಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೇ ಮಾತುಕತೆಯಾಗಲಿಲ್ಲ.

 

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

13 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

16 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

16 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

16 hours ago