ಶಿವಮೊಗ್ಗ: ಜನವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆದರೆ ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. ಒಬಿಸಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡಿದರೆ ನನ್ನನ್ನು ಪರಿಗಣಿಸುವಂತೆ ಕೋರಿದ್ದೇನೆ ಎಂದರು.
ಕಳೆದ ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ. ಒಬಿಸಿ ಸಮುದಾಯಕ್ಕೆ ಆದ್ಯತೆ ನೀಡಿದರೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ ಎಂದರು.
ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗಬಹುದೆಂಬ ನಿರೀಕ್ಷೆಯಿದೆ. ಪಕ್ಷದಲ್ಲಿನ ಭಿನ್ನಮತದ ಬಗ್ಗೆ ವರಿಷ್ಠರು ಗಮನಹರಿಸಿದ್ದಾರೆ. ಶೀಘ್ರದಲ್ಲೇ ಪಕ್ಷದ ಹೈಕಮಾಂಡ್ ತೀಕ್ಷ್ಣವಾದ ನಿರ್ಧಾರ ಕೈಗೊಳ್ಳಲಿದೆ ಎಂದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…