ರಾಜ್ಯ

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು ಸ್ಪಷ್ಟನೆ ನೀಡಿದರು.

ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು.

ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು.

ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಸ್ಪಷ್ಟನೆ ನೀಡಿದರು ಪ್ರಲ್ಹಾದ ಜೋಶಿ.

ಇನ್ನು, ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪೆಸಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ ಎಂದು ಜೋಶಿ ಕಿಡಿ ಕಾರಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯನ್ನು ಬಂಧಿಸಬೇಕೆನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಒಂದು ರೀತಿ ಹುಂಬತನ ಪ್ರದರ್ಶಿಸುತ್ತಿದೆ ಎಂದು ಲೇವಡಿ ಮಾಡಿದರು.

ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ “ಕೋಲ್ ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದು ಮಾಡುತ್ತಿತ್ತು”. ಇಂಥ ಒಂದು ಖಾತೆ ನಿರ್ವಹಿಸಿದಾಗ್ಯೂ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ ಎಂದು ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

1 hour ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

1 hour ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

1 hour ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

1 hour ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

1 hour ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

2 hours ago