ರಾಜ್ಯ

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು ಸ್ಪಷ್ಟನೆ ನೀಡಿದರು.

ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು.

ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು.

ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಸ್ಪಷ್ಟನೆ ನೀಡಿದರು ಪ್ರಲ್ಹಾದ ಜೋಶಿ.

ಇನ್ನು, ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪೆಸಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ ಎಂದು ಜೋಶಿ ಕಿಡಿ ಕಾರಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯನ್ನು ಬಂಧಿಸಬೇಕೆನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಒಂದು ರೀತಿ ಹುಂಬತನ ಪ್ರದರ್ಶಿಸುತ್ತಿದೆ ಎಂದು ಲೇವಡಿ ಮಾಡಿದರು.

ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ “ಕೋಲ್ ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದು ಮಾಡುತ್ತಿತ್ತು”. ಇಂಥ ಒಂದು ಖಾತೆ ನಿರ್ವಹಿಸಿದಾಗ್ಯೂ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ ಎಂದು ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

10 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

51 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

52 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

56 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

59 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago